ತಿರುವನಂತಪುರಂ (ಕೇರಳ) – ಭಾರತದಲ್ಲಿ ವಿವಾಹದ ಅಂತರ್ಗತ ಬಲಾತ್ಕಾರಕ್ಕೆ ಶಿಕ್ಷೆ ಇಲ್ಲದಿದ್ದರೂ ಆ ಸಂದರ್ಭದಲ್ಲಿ ವಿವಾಹ ವಿಚ್ಛೇದನೆಗಾಗಿ ಖಚಿತವಾಗಿಯೂ ಅವಕಾಶ ನೀಡಬಹುದಾಗಿದೆ, ಎಂದು ಕೇರಳ ಉಚ್ಚ ನ್ಯಾಯಾಲಯವು ಹೇಳಿದೆ. ಇದೇ ವೇಳೆಗೆ ವಿವಾಹ ಕಾನೂನಿನಲ್ಲಿ ಸುಧಾರಣೆ ಮಾಡುವ ಆವಶ್ಯಕತೆ ಇದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಹೆಂಡತಿಯ ಸ್ವಾಂತಂತ್ರ್ಯವನ್ನು ನಿರ್ಲಕ್ಷಿಸುವ ಗಂಡನ ಸ್ವಭಾವ ‘ವಿವಾಹದ ಅಂತರ್ಗತ ಬಲಾತ್ಕಾರ’ ಎನ್ನಲಾಗಿದೆ; ಆದರೆ ಅಂತಹ ವರ್ತನೆಗೆ ಶಿಕ್ಷೆಯನ್ನು ನೀಡಲಾಗುವುದಿಲ್ಲ. ಇಂತಹ ವರ್ತನೆ ಶಾರೀರಿಕ ಮತ್ತು ಮಾನಸಿಕ ಹಿಂಸೆಯಾಗಿದೆ. ವಿವಾಹದಲ್ಲಿ ಸಂಗಾತಿಗಳಿಗೆ ಸಮನಾಗಿ ನೋಡಿಕೊಳ್ಳಬೇಕು. ಗಂಡನು ಹೆಂಡತಿಯ ಶರೀರದ ಮೇಲೆ ಅಧಿಕಾರವನ್ನು ತೋರಿಸಬಾರದು.
ಪ್ರಕರಣವೊಂದರಲ್ಲಿ ಹೆಂಡತಿಯು ಕೌಟುಂಬಿಕ ನ್ಯಾಯಾಲಯದಲ್ಲಿ ವಿವಾಹ ವಿಚ್ಛೇದನೆಗಾಗಿ ಪ್ರಯತ್ನಿಸಿದ್ದಳು. ಆಗ ಹೆಂಡತಿಗೆ ಹಿಂಸೆ ಮಾಡಿದ ಆಧಾರದ ಮೇರೆಗೆ ಅನುಮತಿ ನೀಡಲಾಗಿತ್ತು. ಈ ತೀರ್ಪಿನ ವಿರುದ್ಧ ಗಂಡನು ಕೇರಳದ ಉಚ್ಚ ನ್ಯಾಯಾಲಯದಲ್ಲಿ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದನು; ಆದರೆ ನ್ಯಾಯಾಲಯವು ಈ ಅರ್ಜಿಯನ್ನು ತಿರಸ್ಕರಿಸಿ ಕೌಟುಂಬಿಕ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿದೆ.

ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ