520 ಕಾಶ್ಮೀರಿ ಹಿಂದೂಗಳು ಕಾಶ್ಮೀರ ಕಣಿವೆಗೆ ಮರಳಿದರು !
ಕೇವಲ 9 ಕಾಶ್ಮೀರಿ ಹಿಂದೂಗಳಿಗೆ ಆಸ್ತಿ ದೊರಕಿತು, ಈ ಪರಿಸ್ಥಿತಿ ಖೇದಜನಕವಾಗಿದೆ. ಇದರರ್ಥ ಕಾಶ್ಮೀರದಲ್ಲಿ ಹಿಂದೂಗಳಿಗೆ ಸುರಕ್ಷಿತ ವಾತಾವರಣ ಇನ್ನೂ ಸೃಷ್ಟಿಯಾಗಿಲ್ಲ. ಅಲ್ಲಿನ ಮತಾಂಧರು ಮತ್ತು ಜಿಹಾದಿ ಭಯೋತ್ಪಾದಕರನ್ನು ನಿರ್ಮೂಲನೆ ಮಾಡಿದರೆ ಮಾತ್ರ ಹಿಂದೂಗಳಿಗೆ ಸುರಕ್ಷಿತವೆನಿಸುವುದು !

ನವ ದೆಹಲಿ : ಕಾಶ್ಮೀರದಲ್ಲಿ ಸ್ಥಳಾಂತರಗೊಂಡ ಹಿಂದೂಗಳ ಆಸ್ತಿಯನ್ನು ಮರಳಿ ಪಡೆಯಲು ಕೇಂದ್ರ ಸರಕಾರ ಪ್ರಯತ್ನಿಸುತ್ತಿದೆ. ಅವರಲ್ಲಿ ಕೆಲವರಿಗೆ ಆಸ್ತಿಯನ್ನು ಹಿಂತಿರುಗಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 9 ಕಾಶ್ಮೀರಿ ಹಿಂದೂಗಳಿಗೆ ಅವರ ಆಸ್ತಿಯನ್ನು ಮರಳಿ ನೀಡಲಾಗಿದೆ ಎಂದು ಕೇಂದ್ರ ಸರಕಾರವು ರಾಜ್ಯಸಭೆಯಲ್ಲಿ ತಿಳಿಸಿದೆ.
1. ಕೇಂದ್ರ ಗೃಹರಾಜ್ಯ ಸಚಿವ ನಿತ್ಯಾನಂದ ರಾಯ ಅವರು ಈ ಬಗ್ಗೆ ಮಾಹಿತಿ ನೀಡುತ್ತಾ, ಆಯಾ ಜಿಲ್ಲಾ ದಂಡಾಧಿಕಾರಿಗಳು ಕಾಶ್ಮೀರದ ಎಲ್ಲ ಜಿಲ್ಲೆಗಳಲ್ಲಿ ಸ್ಥಳಾಂತರಗೊಂಡ ಕಾಶ್ಮೀರಿಗಳ ಆಸ್ತಿಗಳ ಕಾನೂನಿನ ಸಂರಕ್ಷಕರಾಗಿದ್ದಾರೆ. ಯಾರಾದರೂ ಈ ಆಸ್ತಿಯನ್ನು ಅತಿಕ್ರಮಿಸಿಕೊಂಡಿದ್ದರೆ, ಅವರ ವಿರುದ್ಧ ಜಿಲ್ಲಾಧಿಕಾರಿಗಳು ಕಾನೂನು ಕ್ರಮ ಕೈಗೊಳ್ಳುತ್ತಾರೆ. ಕಾಶ್ಮೀರಿ ಹಿಂದೂಗಳು ತಮ್ಮ ಭೂಮಿಯನ್ನು ಹಿಂಪಡೆಯಲು ಜಿಲ್ಲಾಧಿಕಾರಿಯನ್ನು ಸಂಪರ್ಕಿಸಬಹುದು.
2. ಜಮ್ಮು – ಕಾಶ್ಮೀರ ಆಡಳಿತವು ನೀಡಿದ ಮಾಹಿತಿಗನುಸಾರ, ಕಲಮ್ 370 ರದ್ದಾದ ನಂತರ ಒಟ್ಟು 520 ಸ್ಥಳಾಂತರಗೊಂಡಿದ್ದ ಜನರು ಕಾಶ್ಮೀರಕ್ಕೆ ಮರಳಿದ್ದಾರೆ. ಅಲ್ಲಿ ಅವರಿಗೆ `ಪ್ರಧಾನಮಂತ್ರಿ ವಿಕಾಸ ಪ್ಯಾಕೇಜ್ –2015′ ಅಡಿಯಲ್ಲಿ ಉದ್ಯೋಗಗಳನ್ನು ಪಡೆಯಲು ಸಾಧ್ಯವಾಗುತ್ತದೆ.
Nine J&K properties vacated by Hindus restored: Government in Rajya Sabha https://t.co/77ioQFAmLX pic.twitter.com/GbcCbu1RoF
— The Times Of India (@timesofindia) August 12, 2021
‘ಜೀವೋತ್ತಮ ವಿದ್ಯಾಪೀಠಂ’ ಸನಾತನ ಧರ್ಮದ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ! – ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ ದೂರು ದಾಖಲು : ಇಬ್ಬರ ಬಂಧನ
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein