
ಕರ್ಣಾವತಿ (ಗುಜರಾತ) – ರಾಜ್ಯದಲ್ಲಿನ ಭಾಜಪ ಸರಕಾರದ ಮುಖ್ಯಮಂತ್ರಿ ವಿಜಯ ರೂಪಾಣಿಯವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರೂಪಾಣಿಯವರು ರಾಜ್ಯಪಾಲರನ್ನು ಭೇಟಿಯಾಗಿ ಅವರ ಬಳಿ ರಾಜೀನಾಮೆಯನ್ನು ನೀಡಿದರು. ಸ್ವತಃ ವಿಜಯ ರೂಪಾಣಿಯವರು ಪತ್ರಿಕಾ ಪರಿಷತ್ತನ್ನು ಆಯೋಜಿಸಿ ಈ ಬಗ್ಗೆ ಮಾಹಿತಿ ನೀಡಿದರು. ಅವರು ‘ಗುಜರಾತಿನ ಜನತೆಯು ನನ್ನ ಮೇಲೆ ವಿಶ್ವಾಸವನ್ನು ತೋರಿಸಿದೆ, ಈ ಬಗ್ಗೆ ನಾನು ಜನತೆ ಮತ್ತು ಭಾಜಪಕ್ಕೆ ಆಭಾರಿಯಾಗಿದ್ದೇನೆ. ನನ್ನ ರಾಜೀನಾಮೆಯಿಂದ ಪಕ್ಷದಲ್ಲಿ ಹೊಸ ಮುಖಗಳಿಗೆ ಅವಕಾಶ ಮತ್ತು ಜವಾಬ್ದಾರಿ ದೊರೆಯುವುದು’ ಎಂದು ಹೇಳಿದರು. ಈ ಸಮಯದಲ್ಲಿ ಅವರು ಇಂದಿನವರೆಗೆ ದೊರೆತಿರುವ ಸಹಾಯದ ಬಗ್ಗೆ ಎಲ್ಲರಿಗೆ ಧನ್ಯವಾದಗಳನ್ನು ತಿಳಿಸಿದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಭಾಜಪವು ಹೊಸ ಮುಖಗಳೊಂದಿಗೆ ಹೋರಾಡುವ ಸಿದ್ಧತೆ ಮಾಡುತ್ತಿರುವ ಮಾಹಿತಿಯು ಸೂತ್ರಗಳ ಮೂಲಕ ತಿಳಿದುಬಂದಿದೆ.
ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಸಿಎಂ ಸ್ಥಾನಕ್ಕೆ ದಿಢೀರ್ ರಾಜೀನಾಮೆ#VijayRupani #GujaratCM #Udayavani #trendinghttps://t.co/Qdu1RalHGq
— Udayavani (@udayavani_web) September 11, 2021
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !