
ಕರ್ಣಾವತಿ (ಗುಜರಾತ) – ರಾಜ್ಯದಲ್ಲಿನ ಭಾಜಪ ಸರಕಾರದ ಮುಖ್ಯಮಂತ್ರಿ ವಿಜಯ ರೂಪಾಣಿಯವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರೂಪಾಣಿಯವರು ರಾಜ್ಯಪಾಲರನ್ನು ಭೇಟಿಯಾಗಿ ಅವರ ಬಳಿ ರಾಜೀನಾಮೆಯನ್ನು ನೀಡಿದರು. ಸ್ವತಃ ವಿಜಯ ರೂಪಾಣಿಯವರು ಪತ್ರಿಕಾ ಪರಿಷತ್ತನ್ನು ಆಯೋಜಿಸಿ ಈ ಬಗ್ಗೆ ಮಾಹಿತಿ ನೀಡಿದರು. ಅವರು ‘ಗುಜರಾತಿನ ಜನತೆಯು ನನ್ನ ಮೇಲೆ ವಿಶ್ವಾಸವನ್ನು ತೋರಿಸಿದೆ, ಈ ಬಗ್ಗೆ ನಾನು ಜನತೆ ಮತ್ತು ಭಾಜಪಕ್ಕೆ ಆಭಾರಿಯಾಗಿದ್ದೇನೆ. ನನ್ನ ರಾಜೀನಾಮೆಯಿಂದ ಪಕ್ಷದಲ್ಲಿ ಹೊಸ ಮುಖಗಳಿಗೆ ಅವಕಾಶ ಮತ್ತು ಜವಾಬ್ದಾರಿ ದೊರೆಯುವುದು’ ಎಂದು ಹೇಳಿದರು. ಈ ಸಮಯದಲ್ಲಿ ಅವರು ಇಂದಿನವರೆಗೆ ದೊರೆತಿರುವ ಸಹಾಯದ ಬಗ್ಗೆ ಎಲ್ಲರಿಗೆ ಧನ್ಯವಾದಗಳನ್ನು ತಿಳಿಸಿದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಭಾಜಪವು ಹೊಸ ಮುಖಗಳೊಂದಿಗೆ ಹೋರಾಡುವ ಸಿದ್ಧತೆ ಮಾಡುತ್ತಿರುವ ಮಾಹಿತಿಯು ಸೂತ್ರಗಳ ಮೂಲಕ ತಿಳಿದುಬಂದಿದೆ.
ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಸಿಎಂ ಸ್ಥಾನಕ್ಕೆ ದಿಢೀರ್ ರಾಜೀನಾಮೆ#VijayRupani #GujaratCM #Udayavani #trendinghttps://t.co/Qdu1RalHGq
— Udayavani (@udayavani_web) September 11, 2021
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!