ಸಾಧಕರಿಗೆ ಸೂಚನೆ

೧. ದತ್ತನ ನಾಮಜಪ ಮಾಡುವುದು : ‘ಪ್ರಸ್ತುತ ಅನೇಕ ಸಾಧಕರಿಗೆ ಕೆಟ್ಟ ಶಕ್ತಿಗಳ ತೊಂದರೆಯಾಗುತ್ತಿದೆ. ಪಿತೃಪಕ್ಷದಲ್ಲಿ (ಸೆಪ್ಟೆಂಬರ್ ೨೧ ರಿಂದ ಅಕ್ಟೋಬರ್ ೬ ೨೦೨೧) ಈ ತೊಂದರೆ ಹೆಚ್ಚಾಗುವುದರಿಂದ ಈ ಅವಧಿಯಲ್ಲಿ ಪ್ರತಿದಿನ ‘ಓಂ ಓಂ ಶ್ರೀ ಗುರುದೇವ ದತ್ತ ಓಂ ಓಂ | ಈ ನಾಮ ಜಪವನ್ನು ಕಡಿಮೆಪಕ್ಷ ೧ ಗಂಟೆ ಮಾಡಬೇಕು. ಯಾವ ಸಾಧಕರು ತಮಗಾಗುತ್ತಿರುವ ಕೆಟ್ಟ ಶಕ್ತಿಗಳ ತೊಂದರೆ ದೂರವಾಗಲು ಆಧ್ಯಾತ್ಮಿಕ ಉಪಾಯ ಮಾಡುತ್ತಾರೋ, ಅವರು ತಮ್ಮ ಉಪಾಯದ ನಾಮಜಪಗಳನ್ನು ಮಾಡಿ ಹೆಚ್ಚುವರಿ ೧ ಗಂಟೆ ದತ್ತನ ನಾಮಜಪವನ್ನು ಮಾಡಬೇಕು. ದತ್ತನ ನಾಮಜಪವನ್ನು ಮಾಡುವಾಗ ಕೈಯ ಐದೂ ಬೆರಳುಗಳ ತುದಿಗಳನ್ನು ಜೋಡಿಸಿ ಅನಾಹತಚಕ್ರ ಮತ್ತು ಮಣಿಪುರಚಕ್ರಗಳ ಸ್ಥಾನದಲ್ಲಿ ನ್ಯಾಸ ಮಾಡಬೇಕು. ಯಾವ ಸಾಧಕರು ಉಪಾಯ ಮಾಡುವುದಿಲ್ಲ ಅವರು ವೈಯಕ್ತಿಕ ತಯಾರಿ ವೇಳೆ, ಸ್ನಾನ, ಸ್ವಚ್ಛತೆ-ಸೇವೆ ಮುಂತಾದ ವೇಳೆ ದತ್ತನ ಜಪವನ್ನು ಕಡಿಮೆಪಕ್ಷ ೧ ಗಂಟೆ ಆಗುವಂತೆ ನೋಡಬೇಕು; ಆದರೆ ತೊಂದರೆಯ ಅರಿವಾದರೆ ಅವರೂ ಸಹ ಕುಳಿತು ಮತ್ತು ಮುದ್ರೆ ಮಾಡಿ ದತ್ತನ ನಾಮಜಪ ಮಾಡಬೇಕು.
೨. ಪಿತೃಪಕ್ಷದ ಕಾಲಾವಧಿಯಲ್ಲಿ ಪೂರ್ವಜರ ತೊಂದರೆಗಳಿಂದ ರಕ್ಷಣೆಯಾಗಲು ದತ್ತನಿಗೆ ದಿನದಲ್ಲಿ ನಡುನಡುವೆ ಪ್ರಾರ್ಥನೆ ಮಾಡಬೇಕು.
೩. ಸಾಧ್ಯವಿರುವ ಸಾಧಕರು ಪಿತೃಪಕ್ಷದಲ್ಲಿ ಶ್ರಾದ್ಧವಿಧಿಯನ್ನು ಅವಶ್ಯ ಮಾಡಬೇಕು.
ಹೀಗೆ ಮಾಡುವುದರಿಂದ ಪೂರ್ವಜರ ತೊಂದರೆ ದೂರವಾಗಿ ಸಾಧನೆಗಾಗಿ ಅವರ ಆಶೀರ್ವಾದವೂ ಲಭಿಸುವುದು.
– (ಸದ್ಗುರು) ಡಾ. ಮುಕುಲ ಗಾಡಗೀಳ, ಸನಾತನ ಆಶ್ರಮ, ರಾಮನಾಥಿ, ಗೋವಾ. (೩.೯.೨೦೨೦)
ಸನಾತನದ ಗ್ರಂಥಗಳ ೧ ಕೋಟಿಗೂ ಅಧಿಕ ಪ್ರತಿಗಳು ಪ್ರಕಟ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಅರ್ಪಣೆದಾರರೇ, ಅಧಿಕ ಮಾಸದ ನಿಮಿತ್ತ ಧರ್ಮಪ್ರಸಾರದ ಕಾರ್ಯವನ್ನು ನಿರಂತರವಾಗಿ ಮಾಡುತ್ತಿರುವ ಸನಾತನದ ಆಶ್ರಮಗಳಿಗೆ ಅನ್ನದಾನ ಮಾಡಿ ಪುಣ್ಯಸಂಚಯದೊಂದಿಗೆ ಆಧ್ಯಾತ್ಮಿಕ ಲಾಭವನ್ನು ಪಡೆಯಿರಿ !
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ಸಂಕ್ಷಿಪ್ತ ಚರಿತ್ರೆ
‘ಸನಾತನ ಪ್ರಭಾತ’ಕ್ಕಾಗಿ ಕೇವಲ ನಾವೀನ್ಯ ಮತ್ತು ವೈಶಿಷ್ಟ್ಯಪೂರ್ಣ ಲೇಖನಗಳನ್ನು ಸಂಕ್ಷಿಪ್ತವಾಗಿ ಮತ್ತು ನಿಖರವಾಗಿ ಕಳುಹಿಸಿ !