ಮಹಂತ ನರೇಂದ್ರ ಗಿರಿಯವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ – ಪೊಲೀಸರ ಹೇಳಿಕೆಸಾಯುವ ಮುನ್ನ ಬರೆದ ಪತ್ರದಲ್ಲಿ ಶಿಷ್ಯನ ಹೆಸರು |
ಉತ್ತರಪ್ರದೇಶ ಸರಕಾರವು ತಕ್ಷಣವೇ ಈ ಪ್ರಕರಣದ ತನಿಖೆ ನಡೆಸಬೇಕು ಮತ್ತು ಹಿಂದೂಗಳ ಮುಂದೆ ಸತ್ಯವನ್ನು ತರಬೇಕು ! – ಸಂಪಾದಕರು

ಪ್ರಯಾಗರಾಜ (ಉತ್ತರಪ್ರದೇಶ) – ಅಖಿಲ ಭಾರತೀಯ ಅಖಾಡ ಪರಿಷತ್ತಿನ ಅಧ್ಯಕ್ಷ ಮಹಂತ ನರೇಂದ್ರ ಗಿರಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆಯು ಬೆಳಕಿಗೆ ಬಂದಿದೆ. ಇಲ್ಲಿಯ ಬಾಘಂಬರಿ ಮಠದಲ್ಲಿ ಅವರ ಶವವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ‘ಮಹಂತರು ಆತ್ಮಹತ್ಯೆ ಮಾಡಿಕೊಂಡಿದ್ದು ಅವರು ಆತ್ಮಹತ್ಯೆಯ ಮುನ್ನ ಬರೆದ ಐದು ಪುಟಗಳ ಪತ್ರವು ಪತ್ತೆಯಾಗಿದೆ’, ಎಂದು ಪೊಲೀಸರು ಹೇಳಿದ್ದಾರೆ. ಅದರಲ್ಲಿ ಅವರು ತಾನು ತಮ್ಮ ಶಿಷ್ಯನಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ. ‘ನನ್ನ ಶಿಷ್ಯನು ನನ್ನನ್ನು ಅಪಮಾನಿಸುತ್ತಿದ್ದನು’, ಎಂದು ಹೇಳಲಾಗಿದೆ ಎಂದು ಪೊಲೀಸರು ಹೇಳಿಕೊಂಡಿದ್ದಾರೆ. ಆದರೆ, ‘ಹೆಚ್ಚಿನ ತನಿಖೆಯ ನಂತರ ಮಾಹಿತಿಯು ಬೆಳಕಿಗೆ ಬರಲಿದೆ’, ಎಂದು ಪೊಲೀಸರು ತಿಳಿಸಿದ್ದಾರೆ. ಮಹಂತ ನರೇಂದ್ರ ಗಿರಿಯವರಿಗೆ ಶಿಷ್ಯ ಆನಂದ ಗಿರಿ ಇವರೊಂದಿಗೆ ಸಂಪತ್ತಿನ ವಿವಾದವಿತ್ತು; ಆದರೆ ನಂತರ ಮಧ್ಯವರ್ತಿಗಳಿಂದ ಅದನ್ನು ಇತ್ಯರ್ಥ ಪಡಿಸಲಾಗಿತ್ತು. ಮಹಂತ ನರೇಂದ್ರ ಗಿರಿ ಇವರ ಸಾವಿನ ಬಗ್ಗೆ ಸಂತರು, ಮಹಂತರು ಮೊದಲಾದವರು ತಮ್ಮ ದುಃಖವನ್ನು ವ್ಯಕ್ತಪಡಿಸುತ್ತಿದ್ದಾರೆ.
President of Akhil Bharatiya Akhara Parishad Mahant Narendra Giri found dead, suicide note blames disciplehttps://t.co/ZD8ekFJKTl
— OpIndia.com (@OpIndia_com) September 20, 2021
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ