ದೇಶದಲ್ಲಿ ಕೋರೋನಾದಿಂದ ಸಾವನ್ನಪ್ಪಿದವರ ಕುಟುಂಬಕ್ಕೆ 50 ಸಾವಿರ ರೂಪಾಯಿ ಪರಿಹಾರ ಕೊಡಿ ! – ಸರ್ವೋಚ್ಚ ನ್ಯಾಯಾಲಯ

ನವದೆಹಲಿ – ದೇಶದಲ್ಲಿ ಕೊರೋನಾದಿಂದ ಸಾವನ್ನಪ್ಪಿರುವ ಪ್ರತಿಯೊಬ್ಬರ ಕುಟುಂಬಕ್ಕೆ 50 ಸಾವಿರ ರೂಪಾಯಿ ನಷ್ಟ ಪರಿಹಾರ ನೀಡಬೇಕು ಎಂದು ಸರ್ವೋಚ್ಚ ನ್ಯಾಯಾಲಯವು ಕೇಂದ್ರ ಸರಕಾರಕ್ಕೆ ಆದೇಶ ನೀಡಿದೆ. 30 ದಿನಗಳಲ್ಲಿ ಈ ಹಣವನ್ನು ಕೊಡಲು ನ್ಯಾಯಾಲಯವು ಸೂಚಿಸಿದೆ. ಈ ಮೊದಲು ನ್ಯಾಯಾಲಯವು ಇಂತಹ ಪ್ರತಿಯೊಂದು ಕುಟುಂಬಕ್ಕೆ 4 ಲಕ್ಷ ರೂಪಾಯಿ ಕೊಡಲು ಕೇಂದ್ರ ಸರಕಾರಕ್ಕೆ ಆದೇಶ ನೀಡಿತ್ತು, ಆದರೆ ಕೇಂದ್ರ ಸರಕಾರ ಈ ಸಂದರ್ಭದಲ್ಲಿ ಅಸಹಾಯಕತೆ ತೋರಿಸಿತ್ತು, ಲಕ್ಷಗಟ್ಟಲೆ ಕುಟುಂಬಗಳಿಗೆ ಇಷ್ಟು ದೊಡ್ಡ ಮೊತ್ತ ಕೊಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರಕಾರ ನ್ಯಾಯಾಲಯಕ್ಕೆ ತಿಳಿಸಿತ್ತು.