ಕೇರಳದಲ್ಲಿ ಧಾರಾಕಾರ ಮಳೆಯಿಂದ ಪ್ರವಾಹ ಪರಿಸ್ಥಿತಿ : 26 ಜನರ ಸಾವು


ತಿರುವನಂತಪುರ (ಕೇರಳ) – ಕೇರಳ ರಾಜ್ಯದಲ್ಲಿ ನಡೆದ ಧಾರಾಕಾರ ಮಳೆಯಿಂದಾಗಿ ಹಲವು ನದಿಗಳಿಗೆ ಪ್ರವಾಹ ಬಂದಿದೆ. ಪ್ರವಾಹವು 26 ಜನರನ್ನು ಬಲಿ ತೆಗೆದುಕೊಂಡಿದೆ. ರಾಜ್ಯದ ಪಠಾಣಮತಿಟ್ಟಾ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಈ 5 ಜಿಲ್ಲೆಗಳಲ್ಲಿ ತೀವ್ರ ನಿಗಾದ ಎಚ್ಚರಿಕೆಯನ್ನು ನೀಡಲಾಗಿದೆ. ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಇವರು, ಅರಬ್ಬಿ ಸಮುದ್ರದಲ್ಲಿನ ಭೂಭಾರ ಕುಸಿತದಿಂದ ಭಾರತೀಯ ಹವಾಮಾನ ಇಲಾಖೆಯು ರಾಜ್ಯದಲ್ಲಿ ಧಾರಾಕಾರ ಮಳೆಯಾಗುವ ಬಗ್ಗೆ ಎಚ್ಚರಿಕೆಯನ್ನು ನೀಡಿದೆ ಎಂದು ಹೇಳಿದ್ದಾರೆ.