
ಕೋಲ್ಕತಾ (ಬಂಗಾಲ) – ಟ್ವಿಟರ್ ನಲ್ಲಿ ಸಕ್ರಿಯವಾಗಿರುವ ತೃಣಮೂಲ ಕಾಂಗ್ರೆಸ್ ನಾಯಕರು ಮತ್ತು ಅವರ ಆಪ್ತರಾಗಿರುವ ‘ಪ್ರಸಿದ್ಧ’ ವ್ಯಕ್ತಿಗಳು ಬಾಂಗ್ಲಾದೇಶದ ಹಲವು ಜಿಲ್ಲೆಗಳಲ್ಲಿ ಶ್ರೀ ದುರ್ಗಾದೇವಿಯ ಪೂಜೆಯ ಸಂದರ್ಭದಲ್ಲಿ ಹಿಂದೂಗಳ ಮೇಲೆ ನಡೆದ ದಾಳಿಯ ವಿರುದ್ಧ ಒಂದು ಸಾಮಾನ್ಯ ನಿಷೇಧವನ್ನೂ ವ್ಯಕ್ತಪಡಿಸಿಲ್ಲ. ತೃಣಮೂಲ ಕಾಂಗ್ರೆಸ್ ಮತ್ತು ವಿಚಾರವಂತರ ಬೂಟಾಟಿಕೆಯ ಬುರಖಾ ಈಗ ತೆರೆದಿದೆ. ನಮಗೆ ಈ ದಾಳಿಯನ್ನು ಖಂಡಿಸಲು ಯಾವುದೇ ಮೇಣದಬತ್ತಿಯ ಪ್ರತಿಭಟನೆ ಮಾಡುತ್ತಿರುವುದು ಕಾಣುತ್ತಿಲ್ಲ. ಅವರ ಅಂಗಡಿಯಲ್ಲಿನ ಮೇಣದ ಬತ್ತಿಗಳು ಖಾಲಿಯಾಗಿವೆಯೇನು ? ಇಂತಹ ಮಾತುಗಳಲ್ಲಿ, ಭಾಜಪದ ವಕ್ತಾರರಾದ ಸಮಿಕ ಭಟ್ಟಾಚಾರ್ಯ ಇವರು ತೃಣಮೂಲ ಕಾಂಗ್ರೆಸ್ ಅನ್ನು ಟೀಕಿಸಿದ್ದಾರೆ. ಅವರು ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.
ಭಟ್ಟಾಚಾರ್ಯರು ತಮ್ಮ ಮಾತನ್ನು ಮುಂದುವರೆಸುತ್ತಾ, ಭಾಜಪವೊಂದೇ ನೆರೆಯ ದೇಶಗಳಲ್ಲಿ ಅಲ್ಪಸಂಖ್ಯಾತರ ಜನಸಂಖ್ಯೆಯ ಬಗ್ಗೆ ಪ್ರಾಮಾಣಿಕವಾಗಿ ಕಾಳಜಿ ವಹಿಸುವ ಪಕ್ಷವಾಗಿದೆ. ನಾವು ಹಿಂದೂಗಳ ಧಾರ್ಮಿಕ ಸ್ಥಳಗಳ ಮೇಲೆ ಜಿಹಾದಿಗಳ ದಾಳಿಯನ್ನು ಬಲವಾಗಿ ಖಂಡಿಸುತ್ತೇವೆ ಎಂದು ಹೇಳಿದರು. (ಕೇಂದ್ರದ ಭಾಜಪ ಸರಕಾರವು ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ರಕ್ಷಿಸಲು ಪ್ರಯತ್ನಗಳನ್ನು ಮಾಡಬೇಕೆನ್ನುವುದು ಹಿಂದೂಗಳ ಅಪೇಕ್ಷೆಯಾಗಿದೆ ! – ಸಂಪಾದಕರು)
ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ತಂದೆಯ ಹತ್ಯೆ ಮಾಡಿಸಿದ ಮಗನ ಬಂಧನ
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು