
ವಾರಣಾಸಿ (ಉತ್ತರಪ್ರದೇಶ) – ಕಾಶಿ ವಿಶ್ವನಾಥ ಸಂಕುಲ (ಕಾರಿಡಾರ್) ಶೇ. 80 ರಷ್ಟು ಕೆಲಸ ಪೂರ್ಣಗೊಂಡಿದೆ. 800 ಕೋಟಿ ವೆಚ್ಚದಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಶ್ರೀ ಕಾಶಿ ವಿಶ್ವನಾಥ ಮಂದಿರದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಸುನಿಲ ವರ್ಮಾ ಇವರು ಮಾತನಾಡುತ್ತಾ, ಈ ಕಾರಿಡಾರ್ ನ ಸ್ವರೂಪವು ರೂಪುಗೊಂಡಿದೆ. ಈ ಕಾರಿಡಾರ್ ನ ಸೌಂದರ್ಯೀಕರಣ ಕೆಲಸ ನವೆಂಬರ್ 30 ರೊಳಗೆ ಪೂರ್ಣಗೊಳ್ಳಲಿದೆ. ಇದಕ್ಕಾಗಿ 2,200 ಕಾರ್ಮಿಕರು ಶರವೇಗದಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಕಾರಿಡಾರ್ ಗೆ ಮಕರಾನಾ ಮಾರ್ಬಲ್ನಿಂದ ಕೆತ್ತಲಾದ 7 ವಿಧದ ಶಿಲೆಗಳಿಂದ ಭವ್ಯವಾದ ರೂಪವನ್ನು ನೀಡಲಾಗುತ್ತಿದೆ. 5 ಲಕ್ಷದ 27 ಸಾವಿರದ 730 ಚದರ ಅಡಿ ಜಾಗದಲ್ಲಿ ಸಂಪೂರ್ಣ ಕಾರಿಡಾರ್ ನಿರ್ಮಾಣವಾಗುತ್ತಿದೆ. ಇದಕ್ಕಾಗಿ 314 ಮನೆಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಕೊರೊನಾ ಅವಧಿಯಲ್ಲೂ ನಿರ್ಮಾಣ ಕಾರ್ಯ ಸ್ಥಗಿತವಾಗಿರಲಿಲ್ಲ. ನಿರ್ಮಾಣದ ನಂತರ, ಈ ಬೃಹತ್ ಕಾರಿಡಾರನಲ್ಲಿ 2 ಲಕ್ಷ ಭಕ್ತರು ಬರಬಹುದು. ಕೆಲಸ ಮುಗಿದ ನಂತರ, ಭಕ್ತರು ಕಾರಿಡಾರ್ ನ ಹೊರಗಿನ ಪ್ರಾಂಗಣದಲ್ಲಿ ನಿಂತು ಗಂಗಾ ನದಿಯೊಂದಿಗೆ ಮಣಿಕರ್ಣಿಕಾ ಮತ್ತು ಲಲಿತಾ ಘಾಟ್ಗಳ ದರ್ಶನ ಪಡೆಯಲು ಸಾಧ್ಯವಾಗಲಿದೆ.
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ