ಹಿಂಸಾಚಾರದ ಸಂಚನ್ನು ವಿಫಲಗೊಳಿಸಲು ರಾಜ್ಯ ಸರಕಾರದ ಬಳಿ ಇರುವ ಯೋಜನೆ ಸಲ್ಲಿಸಲು ಆದೇಶ
ಯಾರಿಗಾದರೂ ಅನ್ಯಾಯವಾದಾಗ ನ್ಯಾಯಾಲಯವು ಸ್ವಯಂಪ್ರೇರಿತವಾಗಿ ವಿಚಾರಣೆ ನಡೆಸುವುದು ಒಳ್ಳೆಯದಿದೆ. ಅದರೊಂದಿಗೆ ಭಾರತದಾದ್ಯಂತ ಮತಾಂಧರಿಂದ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ, ಲವ್ ಜಿಹಾದ್ ಇತ್ಯಾದಿ ಪ್ರಕರಣಗಳನ್ನೂ ನ್ಯಾಯಾಲಯವು ಗಣನೆಗೆ ತೆಗೆದುಕೊಂಡು ಹಿಂದೂಗಳಿಗೆ ನ್ಯಾಯ ಒದಗಿಸಬೇಕು ಎಂದು ಹಿಂದೂಗಳ ಅಪೇಕ್ಷೆಯಾಗಿದೆ !
ಅಗರ್ತಲಾ (ತ್ರಿಪುರಾ) – ತ್ರಿಪುರಾ ರಾಜ್ಯದಲ್ಲಿ ಕೆಲವು ದಿನಗಳಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆದ ಹಿಂಸಾಚಾರದ ಬಗ್ಗೆ ತ್ರಿಪುರಾ ಉಚ್ಚ ನ್ಯಾಯಾಲಯವು ಸ್ವಯಂಪ್ರೇರಿತವಾಗಿ ವಿಚಾರಣೆ ನಡೆಸಿ ರಾಜ್ಯ ಸರಕಾರದಿಂದ ವರದಿ ಕೇಳಿದೆ. ನವೆಂಬರ್ ೧೦ ರೊಳಗೆ ಈ ಬಗ್ಗೆ ವಿಸ್ತೃತ ವರದಿ ಸಲ್ಲಿಸುವಂತೆ ನ್ಯಾಯಾಲಯ ತಿಳಿಸಿದೆ.
Tripura High Court takes suo motu cognizance of violence stemming from VHP rally
reports @ShagunSuryam #TripuraRiots #TripuraViolence
Read More: https://t.co/jqFrCSBlhx pic.twitter.com/XonIErAFFY
— Bar & Bench (@barandbench) October 30, 2021
ಅದೇ ರೀತಿ ‘ರಾಜ್ಯದಲ್ಲಿ ಕೋಮು ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಷಡ್ಯಂತ್ರವನ್ನು ವಿಫಲಗೊಳಿಸಲು ರಾಜ್ಯ ಸರಕಾರದ ಬಳಿ ಏನೆಲ್ಲ ಯೋಜನೆಗಳಿವೆ ?’, ಎಂಬ ಮಾಹಿತಿಯನ್ನೂ ನೀಡುವಂತೆ ನ್ಯಾಯಾಲಯ ತಿಳಿಸಿದೆ. (ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಭೀಕರ ದೌರ್ಜನ್ಯ ನಡೆಯುತ್ತಿರುವಾಗಲೂ ಅಲ್ಲಿನ ನ್ಯಾಯಾಲಯವು ಈ ರೀತಿ ಸ್ವಯಂಪ್ರೇರಿತವಾಗಿ ಪರಿಗಣಿಸಿರುವುದು ಕಾಣಲಿಲ್ಲ, ಎಂಬುದನ್ನೂ ಗಮನದಲ್ಲಿಟ್ಟುಕೊಳ್ಳಿ ! – ಸಂಪಾದಕರು) ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿಯ ಹಿನ್ನೆಲೆಯಲ್ಲಿ ತ್ರಿಪುರಾದಲ್ಲಿ ಆಂದೋಲನ ಮಾಡುವಾಗ ಹಿಂಸಾಚಾರವಾಯಿತು. ಈ ಸಮಯದಲ್ಲಿ ಅಲ್ಪಸಂಖ್ಯಾತ ಮುಸಲ್ಮಾನರನ್ನು ಗುರಿಯಾಗಿಸಲಾಯಿತು.

FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath