ಗುಂಡಿನ ದಾಳಿ ನಡೆಸಿರುವ ಸೈನಿಕ ಮಾನಸಿಕ ಅಸ್ವಸ್ಥ ಎಂದು ಹೇಳಲಾಗುತ್ತಿದೆ

ಸುಕಮಾ (ಛತ್ತೀಸಗಢ ) – ಸುಕ್ಮಾ ಜಿಲ್ಲೆಯ ಮರಾಯಿಗುಡಾದಲ್ಲಿನ ಲಿಂಗಾನಾಪಲ್ಲಿ ನೆಲೆಯಲ್ಲಿ ರಾತ್ರಿಯಂದು ಕೇಂದ್ರೀಯ ಮೀಸಲು ಪಡೆಯ (ಸಿ.ಆರ್.ಪಿ.ಎಫ್.ನ) ಸೈನಿಕನು ಸಹಸೈನಿಕರ ಮೇಲೆ ನಡೆಸಿದ ಗುಂಡಿನ ದಾಳಿಯಲ್ಲಿ ನಾಲ್ಕು ಸೈನಿಕರು ಹತರಾಗಿದ್ದಾರೆ ಮತ್ತು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗುಂಡಿನ ದಾಳಿ ನಡೆಸಿರುವ ಸೈನಿಕನ ಹೆಸರು ರಿತೇಶ ರಂಜನ್ ಎಂದಾಗಿದೆ. ಈ ಸೈನಿಕನು ಮಾನಸಿಕ ಅಸ್ವಸ್ಥನಾಗಿದ್ದನು. ಆತನಿಂದ ಶಸ್ತ್ರಾಸ್ತ್ರಗಳನ್ನು ಹಿಂಪಡೆಯಲಾಗಿತ್ತು. ಆತ ಮತ್ತೋರ್ವ ಸೈನಿಕನ ಶಸ್ತ್ರ ತೆಗೆದುಕೊಂಡು ಗುಂಡಿನ ದಾಳಿ ನಡೆಸಿದ್ದಾನೆ ಎಂದು ಮೂಲಗಳಿಂದ ತಿಳಿದುಬಂದಿದೆ; ಆದರೆ ಇಲ್ಲಿಯವರೆಗೆ ಸಿ.ಆರ್.ಪಿ.ಎಫ್.ನಿಂದ ಈ ವಿಷಯವಾಗಿ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. (ಒಂದು ವೇಳೆ ಈ ಸೈನಿಕ ಮಾನಸಿಕವಾಗಿ ಅಸ್ವಸ್ಥನಾಗಿದ್ದರೆ, ಆತನನ್ನು ಪಡೆಯಲ್ಲಿ ಏಕೆ ಇಟ್ಟುಕೊಳ್ಳಲಾಗಿತ್ತು ? ಎಂಬ ಪ್ರಶ್ನೆ ಉದ್ಭವಿಸುತ್ತದೆ – ಸಂಪಾದಕರು)
Four CRPF personnel were killed and three others were seriously injured after a jawan opened fire on his fellow soldiers in Chhattisgarh.#CRPF #Chhattisgarh
(@kamaljitsandhu)https://t.co/Ig6p4KTeNX— IndiaToday (@IndiaToday) November 8, 2021
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !