ಇದರ ವಿರುದ್ಧ ಅಖಿಲ ಭಾರತೀಯ ಸಂತ ಸಮಿತಿಯು ಉತ್ತರಪ್ರದೇಶದ ಮನೆಗಳಲ್ಲಿ ಜನಜಾಗರಣ ಅಭಿಯಾನ ನಡೆಸಲಿದೆ !
ಹಿಂದೂಗಳ ಸಾಧುಸಂತರನ್ನು ಈ ರೀತಿಯಲ್ಲಿ ಅವಮಾನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಖಿಲೇಶ ಯಾದವ್ ಅವರ ಮೇಲೆ ದೂರು ದಾಖಲಿಸಿ ಉತ್ತರಪ್ರದೇಶ ಪೊಲೀಸರು ಬಂಧಿಸಬೇಕಿತ್ತು !- ಸಂಪಾದಕರು

ಲಕ್ಷ್ಮಣಪುರಿ (ಉತ್ತರಪ್ರದೇಶ) – ಕೆಂಪು, ಹಳದಿ, ಹಸಿರು ಮತ್ತು ನೀಲಿ ಬಣ್ಣಗಳು ಎಲ್ಲೆಡೆ ಕಂಡುಬರುತ್ತವೆ. ಒಂದು ಬಣ್ಣದ `ಚಿಲುಮಜೀವಿ’ ಜನರ ಜೀವನದಲ್ಲಿ ಸಂತೋಷವನ್ನು ತರಲು ಸಾಧ್ಯವಿಲ್ಲ. ನಾವು ಸಮಾಜವಾದಿಗಳು ಎಲ್ಲ ಬಣ್ಣಗಳಿಂದ ಪರಿಪೂರ್ಣರಾಗಿದ್ದೇವೆ, ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಅಖಿಲೇಶ ಯಾದವ್ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಇವರನ್ನು ಖೇದಕರವಾಗಿ ಟೀಕಿಸಿದರು. ಅವರು ಗಾಜಿಪುರದಲ್ಲಿ ನಡೆದ ಸಭೆಯಲ್ಲಿ ಮಾತನಾಡುತ್ತಿದ್ದರು. ಯಾದವ್ ಅವರ ಈ ಹೇಳಿಕೆಗೆ ಟೀಕೆಯಾಗುತ್ತಿದೆ. ಈ ಹೇಳಿಕೆಗೆ ಅಖಿಲೇಶ ಯಾದವ್ ಇವರು ಅಖಿಲ ಭಾರತಿಯ ಸಂತ ಸಮಿತಿಯಲ್ಲಿ ಕ್ಷಮೆ ಯಾಚಿಸಬೇಕು ಎಂದು ಹೇಳಿದೆ.
(ಸೌಜನ್ಯ : India Today)
ಅಖಿಲ ಭಾರತೀಯ ಸಂತ ಸಮಿತಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ವಾಮಿ ಜಿತೇಂದ್ರಾನಂದ ಸರಸ್ವತಿಯವರು ಮಾತನಾಡುತ್ತಾ, ಉತ್ತರಪ್ರದೇಶದಾದ್ಯಂತ ಸಂತ ಸಮಾಜವು ಮನೆಮನೆಗೆ ತೆರಳಿ ಹಿಂದೂಗಳ ಮತ್ತು ಅವರ ಪರಂಪರೆಯ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡುವ ಕಪಟ ಸಮಾಜವಾದಿಗಳು ಮತ್ತು ಕಾಂಗ್ರೆಸ್ ವಿರುದ್ಧ ಜನಜಾಗರಣ ಅಭಿಯಾನವನ್ನು ಹಮ್ಮಿಕೊಳ್ಳಲಿದೆ.
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ