ಕರ್ತವ್ಯಲೋಪಕ್ಕಾಗಿ ಸರಕಾರಿ ಅಧಿಕಾರಿಗಳ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯದ ಆದೇಶಸ್ಮಶಾನಭೂಮಿಯನ್ನು ಅತಿಕ್ರಮಿಸಿ ಚರ್ಚ್ ಕಟ್ಟಿದ ನಿರ್ಮಿಸಿದ ಪಾದ್ರಿ ! |
|
ಚೆನ್ನೈ (ತಮಿಳುನಾಡು) – ಮದ್ರಾಸ್ ಉಚ್ಚ ನ್ಯಾಯಾಲಯವು ತಮಿಳುನಾಡು ರಾಜ್ಯದ ಕಾಂಚಿಪುರಂ ಜಿಲ್ಲಾಧಿಕಾರಿಗೆ ಮುಂದಿನ ೪ ವಾರಗಳಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿರುವ ಚರ್ಚ್ಅನ್ನು ಕೆಡಹುವಂತೆ ಆದೇಶ ನೀಡಿದೆ. ಜೊತೆಗೆ ವಿಭಾಗೀಯ ಕಂದಾಯ ಅಧಿಕಾರಿ ಮತ್ತು ತಹಶೀಲ್ದಾರ್ ವಿರುದ್ಧ ಕರ್ತವ್ಯಲೋಪ ಎಸಗಿದ ಬಗ್ಗೆ ತನಿಖೆ ನಡೆಸುವಂತೆ ಮತ್ತು ಅದರ ಆಧಾರದಲ್ಲಿ ಎಲ್ಲಾ ತಪ್ಪಿತಸ್ಥರ ವಿರುದ್ಧ ಶಿಕ್ಷಾರ್ಹ ಕ್ರಮ ಕೈಗೊಳ್ಳಲು ಆದೇಶಿಸಿದೆ. ಅರ್ಜಿದಾರರಾದ ಎಂ. ಮುರುಗೇಸನ್ ಇವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ.
ಸ್ಮಶಾನಭೂಮಿಯ ಮೇಲೆ ಬಲವಂತವಾಗಿ ಚರ್ಚ್ ಕಟ್ಟಿಸಿದ ಪಾದ್ರಿ !
ದಾಖಲೆಗಳ ಮಾಹಿತಿಯನ್ನು ಪಡೆದು ಉಭಯ ಪಕ್ಷಗಳ ಯುಕ್ತಿವಾದಗಳನ್ನು ಆಲಿಸಿದ ನ್ಯಾಯಾಲಯ, ಪಾದ್ರಿ ಸಿ. ಸಾಥ್ರೈಕ ಈತನು ಗ್ರಾಮಸ್ಥರ ಹಾಗೂ ಸ್ಥಳೀಯ ಅಧಿಕಾರಿಗಳ ವಿರೋಧದ ನಡುವೆಯೂ ಸರಕಾರಿ ಜಾಗದಲ್ಲಿನ ಸ್ಮಶಾನಭೂಮಿಯ ಮೇಲೆ ಅತಿಕ್ರಮಣ ಮಾಡಿ ಚರ್ಚ್ ನಿರ್ಮಿಸಿದ್ದಾನೆ ಎಂದು ಹೇಳಿತು.

ಶಬರಿಮಲೆ ಚಿನ್ನದ ಹಗರಣದಲ್ಲಿ ‘ತ್ರಾವಣಕೋರ್ ದೇವಸ್ವಂ ಮಂಡಳಿ’ ಮಂಡಳಿಯ ಮಾಜಿ ಅಧ್ಯಕ್ಷರ ವಿರುದ್ಧ ಸಿಕ್ಕ ಸಾಕ್ಷ್ಯಗಳು! : Sabarimala Gold Probe
ಶ್ರೀ ತುಳಜಾಭವಾನಿ ದೇವಿಯ ೪ ಸಾವಿರ ಎಕರೆ ಭೂಮಿ ಹಗರಣದ ಸಮಗ್ರ ತನಿಖೆ ನಡೆಸಿ! : Sri Tulja Bhavani Devi Land scam
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ