ಕರ್ತವ್ಯಲೋಪಕ್ಕಾಗಿ ಸರಕಾರಿ ಅಧಿಕಾರಿಗಳ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯದ ಆದೇಶಸ್ಮಶಾನಭೂಮಿಯನ್ನು ಅತಿಕ್ರಮಿಸಿ ಚರ್ಚ್ ಕಟ್ಟಿದ ನಿರ್ಮಿಸಿದ ಪಾದ್ರಿ ! |
|
ಚೆನ್ನೈ (ತಮಿಳುನಾಡು) – ಮದ್ರಾಸ್ ಉಚ್ಚ ನ್ಯಾಯಾಲಯವು ತಮಿಳುನಾಡು ರಾಜ್ಯದ ಕಾಂಚಿಪುರಂ ಜಿಲ್ಲಾಧಿಕಾರಿಗೆ ಮುಂದಿನ ೪ ವಾರಗಳಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿರುವ ಚರ್ಚ್ಅನ್ನು ಕೆಡಹುವಂತೆ ಆದೇಶ ನೀಡಿದೆ. ಜೊತೆಗೆ ವಿಭಾಗೀಯ ಕಂದಾಯ ಅಧಿಕಾರಿ ಮತ್ತು ತಹಶೀಲ್ದಾರ್ ವಿರುದ್ಧ ಕರ್ತವ್ಯಲೋಪ ಎಸಗಿದ ಬಗ್ಗೆ ತನಿಖೆ ನಡೆಸುವಂತೆ ಮತ್ತು ಅದರ ಆಧಾರದಲ್ಲಿ ಎಲ್ಲಾ ತಪ್ಪಿತಸ್ಥರ ವಿರುದ್ಧ ಶಿಕ್ಷಾರ್ಹ ಕ್ರಮ ಕೈಗೊಳ್ಳಲು ಆದೇಶಿಸಿದೆ. ಅರ್ಜಿದಾರರಾದ ಎಂ. ಮುರುಗೇಸನ್ ಇವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ.
ಸ್ಮಶಾನಭೂಮಿಯ ಮೇಲೆ ಬಲವಂತವಾಗಿ ಚರ್ಚ್ ಕಟ್ಟಿಸಿದ ಪಾದ್ರಿ !
ದಾಖಲೆಗಳ ಮಾಹಿತಿಯನ್ನು ಪಡೆದು ಉಭಯ ಪಕ್ಷಗಳ ಯುಕ್ತಿವಾದಗಳನ್ನು ಆಲಿಸಿದ ನ್ಯಾಯಾಲಯ, ಪಾದ್ರಿ ಸಿ. ಸಾಥ್ರೈಕ ಈತನು ಗ್ರಾಮಸ್ಥರ ಹಾಗೂ ಸ್ಥಳೀಯ ಅಧಿಕಾರಿಗಳ ವಿರೋಧದ ನಡುವೆಯೂ ಸರಕಾರಿ ಜಾಗದಲ್ಲಿನ ಸ್ಮಶಾನಭೂಮಿಯ ಮೇಲೆ ಅತಿಕ್ರಮಣ ಮಾಡಿ ಚರ್ಚ್ ನಿರ್ಮಿಸಿದ್ದಾನೆ ಎಂದು ಹೇಳಿತು.

‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !