ಶ್ರೀ ದತ್ತಜಯಂತಿ (ಡಿಸೆಂಬರ್ ೧೮)

ಇದು ಒಂದು ಸಾಂಪ್ರದಾಯಿಕ ಜನ್ಮೋತ್ಸವ. ಮಾರ್ಗಶಿರ ಹುಣ್ಣಿಮೆಯಂದು ಮೃಗಶಿರ ನಕ್ಷತ್ರದಲ್ಲಿ ಸಾಯಂಕಾಲ ದತ್ತನ ಜನ್ಮವಾಯಿತು, ಆದುದರಿಂದ ಆ ದಿನ ದತ್ತನ ಜನ್ಮೋತ್ಸವವನ್ನು ಎಲ್ಲ ದತ್ತ ಕ್ಷೇತ್ರಗಳಲ್ಲಿ ಆಚರಿಸಲಾಗುತ್ತದೆ.

ಇತಿಹಾಸ

‘ಹಿಂದಿನ ಕಾಲದಲ್ಲಿ ಪೃಥ್ವಿಯ ಮೇಲೆ ಸ್ಥೂಲ ಮತ್ತು ಸೂಕ್ಷ್ಮರೂಪದಲ್ಲಿ ಅಸುರೀ ಶಕ್ತಿಗಳು ದೊಡ್ಡ ಪ್ರಮಾಣದಲ್ಲಿ ಹೆಚ್ಚಾಗಿದ್ದವು. ಅವರನ್ನು ದೈತ್ಯರೆಂದು ಕರೆಯಲಾಗುತ್ತಿತ್ತು. ದೇವಗಣರು ಆ ಅಸುರೀ ಶಕ್ತಿಗಳನ್ನು ನಾಶಗೊಳಿಸಲು ಮಾಡಿದ ಪ್ರಯತ್ನಗಳೆಲ್ಲ ವಿಫಲವಾದವು. ಆಗ ಬ್ರಹ್ಮದೇವನ ಆಜ್ಞೆಗನುಸಾರ ಬೇರೆ ಬೇರೆ ಕಡೆಗಳಲ್ಲಿ ವಿವಿಧ ರೂಪಗಳಲ್ಲಿ ದತ್ತನಿಗೆ ಅವತಾರ ತಾಳಬೇಕಾಯಿತು. ಅನಂತರ ದೈತ್ಯರು ನಾಶವಾದರು. ಆ ದಿನವನ್ನು ‘ದತ್ತಜಯಂತಿ’ಯೆಂದು ಆಚರಿಸಲಾಗುತ್ತದೆ.

ಮಹತ್ವ

ದತ್ತಜಯಂತಿಯಂದು ಪೃಥ್ವಿಯ ಮೇಲೆ ದತ್ತತತ್ತ್ವವು ನಿತ್ಯದ ತುಲನೆಯಲ್ಲಿ ೧೦೦೦ ಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ. ಈ ದಿನ ಮನಃಪೂರ್ವಕ ದತ್ತನ ನಾಮಜಪಾದಿ ಉಪಾಸನೆಯನ್ನು ಮಾಡಿದರೆ ದತ್ತತತ್ತ್ವದ ಆದಷ್ಟು ಹೆಚ್ಚು ಲಾಭವಾಗಲು ಸಹಾಯವಾಗುತ್ತದೆ.

ಜನ್ಮೋತ್ಸವವನ್ನು ಆಚರಿಸುವುದು

ದತ್ತಜಯಂತಿಯನ್ನು ಆಚರಿಸುವ ಸಂಬಂಧದಲ್ಲಿ ಶಾಸ್ತ್ರೋಕ್ತ ವಿಶಿಷ್ಟ ವಿಧಿವಿಧಾನಗಳು ಕಂಡು ಬರುವುದಿಲ್ಲ. ಈ ಉತ್ಸವದ ಮೊದಲು ಏಳು ದಿನ ಗುರುಚರಿತ್ರೆಯ ಪಾರಾಯಣವನ್ನು ಮಾಡುವ ಪದ್ಧತಿಯಿದೆ. ಇದಕ್ಕೆ ಗುರುಚರಿತ್ರೆ ಸಪ್ತಾಹ ಎನ್ನುತ್ತಾರೆ. ಭಜನೆ, ಪೂಜೆ ಮತ್ತು ಕೀರ್ತನೆ ಇತ್ಯಾದಿ ಭಕ್ತಿಯ ವಿಧಗಳು ಪ್ರಚಲಿತವಾಗಿವೆ. (ಆಧಾರ: ಸನಾತನ ನಿರ್ಮಿತ ಗ್ರಂಥ ‘ದತ್ತ’)