ಕೂನ್ನೂರಿನಲ್ಲಿ (ತಮಿಳುನಾಡು) ಹೆಲಿಕಾಪ್ಟರ್ ಅಪಘಾತದಲ್ಲಿ ಗಾಯಗೊಂಡು ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ನಿಧನ

ಬೆಂಗಳೂರು – ತಮಿಳುನಾಡಿನ ಕೂನ್ನೂರಿನಲ್ಲಿ ಡಿಸೆಂಬರ್ ೮ ರಂದು ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ಸಿಡಿಎಸ್ (ಚೀಫ್ ಆಫ್ ಡಿಫೆನ್ಸ್ ಸ್ಟಾಫ್ – ಮೂರೂ ದಳದ ಮುಖ್ಯಸ್ಥ) ಬಿಪಿನ್ ರಾವತ್, ಅವರ ಪತ್ನಿ ಮತ್ತು ಇತರ ೧೧ ಮಂದಿ ಸಾವನ್ನಪ್ಪಿದ್ದರು. ಹಾಗೂ ಗ್ರೂಪ್ ಕ್ಯಾಪ್ಟನ್ ವರುಣ ಸಿಂಹ ಗಂಭೀರವಾಗಿ ಗಾಯಗೊಂಡಿದ್ದರು. ಅವರ ಮೇಲೆ ಬೆಂಗಳೂರಿನ ವಾಯುಪಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿತ್ತು. ಅವರ ದೇಹ ಶೇ. ೪೫ ರಷ್ಟು ಸುಟ್ಟಿತ್ತು. ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು. ಅಂತಿಮವಾಗಿ ಅವರು ಡಿಸೆಂಬರ್ ೧೫ ರಂದು ನಿಧನರಾದರು.