ಭಾಜಪದ ಪದಾಧಿಕಾರಿಯ ಹತ್ಯೆಯ ಪ್ರಕರಣದಲ್ಲಿ ಇಲ್ಲಿಯವರೆಗೆ ಯಾರನ್ನೂ ಬಂಧಿಸಿಲ್ಲ !
|
* ಕೇರಳದಲ್ಲಿ ಮಾಕಪದ ಸರಕಾರ ಇರುವುದರಿಂದ ಮತಾಂಧರು ಹಿಂದೂ ಸಂಘಟನೆಯ ನೇತಾರರ ಹತ್ಯೆ ಮಾಡಿದ್ದರಿಂದ ಅದರ ತನಿಖೆಯಲ್ಲಿ ಉದ್ದೇಶಪೂರ್ವಕವಾಗಿ ಸೋಮಾರಿತನ ಮಾಡಲಾಗುತ್ತಿದೆ, ಎಂದು ಯಾರಾದರೂ ಹೇಳಿದರೆ ಅದರಲ್ಲಿ ಆಶ್ಚರ್ಯವೇನಿದೆ ? – ಸಂಪಾದಕರು * ಹಿಂದೂಗಳಿಗೆ ‘ಮತಾಂಧ ರಾಜಕೀಯ ಪಕ್ಷದ ನೇತಾರನ ಹತ್ಯೆಯ ಪ್ರಕರಣದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಉದ್ದೇಶಪೂರ್ವಕವಾಗಿ ಸಿಲುಕಿಸಲಾಗುತ್ತಿದೆ’ ಎಂದು ಅನಿಸುತ್ತಿದೆ ! – ಸಂಪಾದಕರು |

ಅಲಪ್ಪುಝಾ (ಕೇರಳ) – ಇಲ್ಲಿ ಡಿಸೆಂಬರ್ 18 ರಂದು ರಾತ್ರಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್. ಡಿ. ಪಿ. ಐ.)ದ ರಾಜ್ಯ ಸಚಿವರಾದ ಕೆ.ಎಸ್. ಶಾನರವರ ಹತ್ಯೆಯ ಪ್ರಕರಣದಲ್ಲಿ ಕೇರಳ ಪೊಲೀಸರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಸಾದ ಮತ್ತು ರಥೀಶ ಎಂಬ ಇಬ್ಬರು ಸ್ವಯಂಸೇವಕರನ್ನು ಬಂಧಿಸಿದ್ದಾರೆ. ‘ಇವರು ಮನ್ನನಚೇರಿ ಎಂಬ ಊರಿನಲ್ಲಿ ವಾಸಿಸುತ್ತಿದ್ದು ಹತ್ಯೆಯ ಹಿಂದೆ ಅವರ ಕೈವಾಡವಿತ್ತು ಮತ್ತು ಅವರು ಈ ಹತ್ಯೆಗಾಗಿ ವಾಹನದ ವ್ಯವಸ್ಥೆ ಮಾಡಿದ್ದರು’ ಎಂದು ಪೊಲೀಸರು ಆರೋಪಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಇನ್ನೂ 8 ಜನರನ್ನು ಹುಡುಕುತ್ತಿದ್ದಾರೆ. ಶಾನರವರ ಹತ್ಯೆಯ ಸೇಡು ಎಂದು ಡಿಸೆಂಬರ್ 19 ರಂದು ಭಾಜಪದ ಓಬಿಸಿ ಮೋರ್ಚಾದ ರಾಜ್ಯ ಸಚಿವರಾದ ರಂಜಿತ ಶ್ರೀನಿವಾಸರವರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಪೊಲೀಸರು ಆರೋಪಿಗಳನ್ನು ಇಲ್ಲಿಯವರೆಗೂ ಬಂಧಿಸಿಲ್ಲ. (ಮಾಕಪದ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಗಾಳಿಗೆ ತೂರಿರುವುದರಿಂದ ಈ ರೀತಿಯಲ್ಲಿ ಹತ್ಯೆಗಳು ನಡೆಯುತ್ತಿವೆ. ಇದನ್ನು ನೋಡಿ ಈ ಸರಕಾರವನ್ನು ವಿಸರ್ಜಿಸಿ ಅಲ್ಲಿ ರಾಷ್ಟ್ರಪತಿ ಆಡಳಿತವನ್ನು ಜಾರಿಗೊಳಿಸಬೇಕು ! – ಸಂಪಾದಕರು)
Kerala: Two RSS workers arrested in connection with murder of SDPI leader in Alappuzha https://t.co/EilTfPWGZD
— Republic (@republic) December 20, 2021
ಉತ್ತರಾಖಂಡದಲ್ಲಿ ಖಲಿಸ್ತಾನಿ ಉಗ್ರನ ಬಂಧನ: ಭಾರೀ ಶಸ್ತ್ರಾಸ್ತ್ರಗಳ ವಶ: Khalistani Terrorists Nabbed
ಉದ್ಧವ ಬಾಳಾಸಾಹೇಬ ಠಾಕ್ರೆ ಬಣದ 9 ರಲ್ಲಿ 6 ಸಂಸದರು ಬಂಡಾಯ: ಶಿವಸೇನೆಯಲ್ಲಿ ಸೇರುವ ಸಾಧ್ಯತೆ! : Operation Tiger
ಟೆಲಿಗ್ರಾಮ್’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಟೆಲಿಗ್ರಾಮ್ : Telegram App
ಪುಣೆಯಲ್ಲಿ ಕ್ರಿಶ್ಚಿಯನ್ ಧರ್ಮಗುರು ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲು! : Pune Conversion
‘ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳಂತೆ!’ – ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ
ಸಂಘವು ವ್ಯಕ್ತಿಗೆ ದೇಶಭಕ್ತಿಯನ್ನು ಕಲಿಸುವ ಸಂಸ್ಥೆ: ನೋಂದಣಿಯ ಅಗತ್ಯವಿಲ್ಲ! – ಸಿ.ಟಿ. ರವಿ