ಉತ್ತರಾಖಂಡದಲ್ಲಿ ಕಾಂಗ್ರೆಸ್‍ನ ನಾಯಕ ಮತ್ತು ಮಾಜಿ ಮುಖ್ಯಮಂತ್ರಿಯನ್ನು ಅವಾಚ್ಯ ಪದಗಳಿಂದ ನಿಂದಿಸಿದ್ದರಿಂದ ಪಕ್ಷದ ಪ್ರಧಾನ ಕಾರ್ಯದರ್ಶಿಗೆ ರಾವತ್ ಬೆಂಬಲಿಗರಿಂದ ಥಳಿತ !

ತನ್ನದೇ ಪಕ್ಷದ ಪದಾಧಿಕಾರಿಯನ್ನೇ ಥಳಿಸುವ ಕಾರ್ಯಕರ್ತರಿರುವ ಪಕ್ಷ ಎಂದಾದರೂ ಕಾನೂನಿನ ರಾಜ್ಯವನ್ನು ನೀಡುವರೇ ?- ಸಂಪಾದಕರು 

ಡೆಹ್ರಾಡೂನ್ (ಉತ್ತರಾಖಂಡ) – ಉತ್ತರಾಖಂಡದ ಕಾಂಗ್ರೆಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರು ಕಾಂಗ್ರೆಸ್ ಬಗ್ಗೆ ಅಸಾಮಾಧಾನಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ರಾವತ್ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಡೆದಾಟವಾಗಿದೆ. `ರಾಜ್ಯದ ಕಾಂಗ್ರೆಸ್‍ನ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಶಾ ಅವರು ಹರೀಶ್ ರಾವತ್ ಅವರನ್ನು ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ’, ಎಂದು ಆರೋಪಿಸಿ ರಾವತ್ ಬೆಂಬಲಿಗರು ಅವರನ್ನು ಥಳಿಸಿದ್ದಾರೆ ಎನ್ನಲಾಗಿದೆ.

(ಸೌಜನ್ಯ : Public News)