ಹಿಂದುತ್ವನಿಷ್ಠರ ಸಂಘಟನೆಗಳ ಒಗ್ಗಟ್ಟಿನ ಯಶಸ್ಸು ! ಇದೇ ರೀತಿಯಲ್ಲಿ ಹಿಂದೂಗಳೆಲ್ಲ ಒಗ್ಗೂಡಿದರೆ ಹಿಂದೂಗಳ ಶ್ರದ್ಧಾಸ್ಥಾನಗಳನ್ನು ಅವಮಾನಿಸುವ ಧೈರ್ಯ ಯಾರೂ ಮಾಡುವುದಿಲ್ಲ !- ಸಂಪಾದಕರು

ಭಾಗ್ಯನಗರ (ತೆಲಂಗಾಣಾ) – ಹಿಂದೂ ಸಂಘಟನೆಗಳ ವಿರೋಧದ ನಂತರ ಭಾಗ್ಯನಗರ (ತೆಲಂಗಾಣ)ದಲ್ಲಿ ಹಾಸ್ಯನಟ ಮುನಾವರ್ ಫಾರೂಕಿ ಅವರ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.
ತೆಲಂಗಾಣಾ ರಾಜ್ಯದ ನಗರಾಭಿವೃದ್ಧಿ ಸಚಿವ ಕೆ.ಟಿ. ರಾಮರಾವ ಇವರು ಫಾರೂಕಿ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರು. (ಇದು ಹಿಂದೂದ್ವೇಷ ಅಲ್ಲವೇ ? – ಸಂಪಾದಕರು) ಈ ಕುರಿತು ಫಾರೂಕಿಯು `ಜನವರಿ 9 ರಂದು ಭಾಗ್ಯನಗರದಲ್ಲಿ ಕಾರ್ಯಕ್ರಮ ಮಾಡುವೆ’, ಎಂದು ಹೇಳಿದ್ದ. ಈ ಮಾಹಿತಿ ಸಿಕ್ಕಿದಾಶಕ್ಷಣ `ಹಿಂದೂ ಜಾಯಿಂಟ್ ಆಕ್ಷನ್ ಕಮಿಟಿ’, ಹಿಂದೂ ಜನಜಾಗೃತಿ ಸಮಿತಿ ಇತ್ಯಾದಿ 15 ಹಿಂದೂ ಸಂಘಟನೆಗಳು ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ನೀಡಿ ಕಾರ್ಯಕ್ರಮ ರದ್ದುಗೊಳಿಸುವಂತೆ ಒತ್ತಾಯಿಸಲಾಯಿತು. ಜೊತೆಗೆ ಧರ್ಮಾಭಿಮಾನಿಗಳಿಂದಲೂ ಈ ಬಗ್ಗೆ ಭಾರೀ ಸಂಖ್ಯೆಯಲ್ಲಿ ಟ್ವೀಟ್ಗಳು ಮಾಡಲಾಯಿತು. ಈ ಬಗ್ಗೆ ಭಾಜಪಸ ಶಾಸಕ ಟಿ. ರಾಜಾ ಸಿಂಗ್, ಭಾಜಪದ ರಾಜ್ಯಾಧ್ಯಕ್ಷ ಬಂಡಿ ಸಂಜಯ ಮತ್ತು ಭಾಜಪ ಸಂಸದ ಧರ್ಮಪುರಿ ಅರವಿಂದ ಇವರೂ ಕೂಡ ಕಾರ್ಯಕ್ರಮ ರದ್ದುಗೊಳಿಸುವಂತೆ ಸರಕಾರಕ್ಕೆ ಎಚ್ಚರಿಕೆ ನೀಡಿದರು. ಅಷ್ಟೇ ಅಲ್ಲದೇ, ‘ಹಿಂದೂ ಜಾಯಿಂಟ ಆಕ್ಷನ್ ಕಮಿಟಿಯಿಂದ ಉಚ್ಚ ನ್ಯಾಯಾಲಯದಲ್ಲಿ ಅರ್ಜಿಯನ್ನೂ ಸಲ್ಲಿಸಲಾಗಿದೆ. ಈ ಬಗ್ಗೆ ಜನವರಿ 7 ರಂದು ಆಲಿಕೆ ಮಾಡಬೇಕಿತ್ತು; ಆದರೆ ಜನವರಿ 6 ರಂದು ಫಾರೂಕಿ ಕಾರ್ಯಕ್ರಮವನ್ನು ರದ್ದುಗೊಳಿಸಿದ. ಆದರೂ `ಫಾರೂಕಿಗೆ ಇನ್ನುಮುಂದೆ ಕಾರ್ಯಕ್ರಮ ನೀಡಲು ಅವಕಾಶ ನೀಡಬಾರದು’, ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ.
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!