ಮುಸಲ್ಮಾನ ಯುವಕನು ಗ್ರಾಮಸ್ಥರಿಗೆ ಥಳಿಸಿದ ಪ್ರಕರಣ

ರಾಯಪುರ (ಛತ್ತಿಸಗಡ) – ರಾಜ್ಯದಲ್ಲಿ ಬಲರಾಮಪುರದಲ್ಲಿಯ ಕುಂಭಕಲಾ ಗ್ರಾಮದಲ್ಲಿ ಕೆಲವು ಗ್ರಾಮಸ್ಥರು ಮುಸಲ್ಮಾನರ ಮೇಲೆ ಬಹಿಷ್ಕಾರ ಹಾಕಲು ಪ್ರಮಾಣ ಮಾಡುತ್ತಿರುವ ಒಂದು ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾದ ನಂತರ ಪೊಲೀಸರು ಇದರ ತನಿಖೆ ನಡೆಸುತ್ತಿದ್ದಾರೆ.
ಜನವರಿ 1 ರಂದು ಕೆಲವು ಮುಸ್ಲಿಂ ಯುವಕರು ಕ್ರೈಸ್ತರ ಹೊಸವರ್ಷಾರಂಭ ಆಚರಣೆಗಾಗಿ ಲುಂಡ್ರಾ ಪೊಲೀಸ್ ಠಾಣೆಯ ವ್ಯಾಪ್ತಿಗೆ ಒಳಪಡುವ ಕುಂಭಕಲಾ ಗ್ರಾಮಕ್ಕೆ ತಲುಪಿದ ನಂತರ ಸ್ಥಳೀಯ ಯುವಕರೊಂದಿಗೆ ವಾದ-ವಿವಾದ ನಡೆಯಿತು. ಆ ಸಮಯದಲ್ಲಿ ಮತಾಂಧ ಯುವಕರು ಗ್ರಾಮಸ್ಥರನ್ನು ಥಳಿಸಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದೂರು ದಾಖಲಿಸಿ 6 ಜನರನ್ನು ಬಂಧಿಸಿದ್ದಾರೆ. ನಂತರ ಅವರಿಗೆ ಜಾಮೀನು ಸಿಕ್ಕಿತ್ತು. ಆದ್ದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಪೊಲೀಸ್ ಠಾಣೆಗೆ ಸುತ್ತುವರೆದರು, `ಈ ಯುವಕರ ಮೇಲೆ ಕಠಿಣ ಕಲಂನ ಅಡಿಯಲ್ಲಿ ಕ್ರಮಕೈಗೊಂಡಿಲ್ಲ, ಆದ್ದರಿಂದ ಅವರು ಜಾಮೀನಿನ ಮೇಲೆ ಬಿಡುಗಡೆಯಾದರು, ಎಂದು ಆರೋಪಿಸಿದ್ದಾರೆ. ಆ ಸಮಯದಲ್ಲಿ ಗ್ರಾಮಸ್ಥರು ಅಲ್ಲಿಯೇ ಪ್ರಮಾಣ ತೊಟ್ಟರು, `ನಾವು ಮುಸಲ್ಮಾನರ ಜೊತೆ ಇನ್ನು ಮುಂದೆ ಯಾವುದೇ ಸಂಬಂಧ ಇಟ್ಟುಕೊಳ್ಳುವುದಿಲ್ಲ. ಅವರ ಅಂಗಡಿಗಳಿಂದ ಏನೂ ಖರಿದಿಸುವುದಿಲ್ಲ ಮತ್ತು ಅವರಿಗೆ ಭೂಮಿಯು ಮಾರುವುದಿಲ್ಲ.’ ಆ ಸಮಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಆಗುತ್ತಿದೆ.
Chhattisgarh: Hindu villagers vow to boycott Muslims after tussle between two families https://t.co/0ahuhddCHK
— Republic (@republic) January 8, 2022
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ
ಕೇಂದ್ರೀಯ ಕಾಯ್ದೆಯಡಿಯ ಶಿಕ್ಷೆ ಈಗಾಗಲೇ ಪೂರ್ಣಗೊಂಡಿದ್ದರೆ, ಅವಧಿಗೂ ಮುನ್ನ ಬಿಡುಗಡೆ ಏಕೆ ಇಲ್ಲ?
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished