ಮಂಗಳೂರಿನಲ್ಲಿ ಆಯೋಜಿಸಲಾಗಿದ್ದ ‘One Humanity Many Paths’ ಈ ವಿಶೇಷ ಕಾರ್ಯಕ್ರಮದಲ್ಲಿ ಸನಾತನ ಸಂಸ್ಥೆಯ ಸಹಭಾಗ

ಮಂಗಳೂರು – ಜನವರಿ 12 ರಂದು ‘ಮಹಾತ್ಮ ಗಾಂಧಿ ಸೆಂಟಿನೆಲ್ ಪಿ.ಯು. ಕಾಲೇಜಿನಲ್ಲಿ ‘One Humanity Many Paths’ (‘ಒಂದು ಮಾನವೀಯತೆ ಹಲವು ಮಾರ್ಗಗಳು’) ಎಂಬ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಹಿಂದೂ ಧರ್ಮದ ಪ್ರತಿನಿಧಿಯಾಗಿ ಸನಾತನ ಸಂಸ್ಥೆಯ ಶ್ರೀಮತಿ. ಲಕ್ಷ್ಮೀ ಪೈ ಅವರನ್ನು ಆಹ್ವಾನಿಸಲಾಯಿತು. ಬೋಂದೆಲ್ ಚರ್ಚ್ ನ ಫಾದರ್ ಗೊನ್ಸಾಲ್ವಿಸ್ ಇವರು ಕ್ರೈಸ್ತ ಧರ್ಮದ ಪ್ರತಿನಿಧಿಯಾಗಿ ಹಾಗೂ ಶಂಶಾದ್ ಇವರು ಇಸ್ಲಾಂನ ಪ್ರತಿನಿಧಿಯಾಗಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸೌ. ಲಕ್ಷ್ಮೀ ಪೈ ಅವರು, ಸನಾತನ ಹಿಂದೂ ಧರ್ಮವು ಅನಾದಿ ಮತ್ತು ಅನಂತವಾಗಿದೆ. `ಇಡೀ ವಿಶ್ವವೇ ನನ್ನ ಮನೆ’ ಎಂಬ ಉದಾತ್ತ ಚಿಂತನೆಯನ್ನು ಹಿಂದೂ ಧರ್ಮವೇ ವಿಶ್ವಕ್ಕೆ ನೀಡಿದೆ. ‘ಸರ್ವೇತ್ರ ಸುಖಿಂ: ಸಂತು ಸರ್ವೇ ಸಂತು ನಿರಾಮಯ : ಸರ್ವೇ ಭದ್ರಾಣಿ ಪಶ್ಯನ್ತು ಮಾ ಕಶ್ಚಿದ್ ದುಃಖಮಾಪ್ನುಯಾತ್. (ಅರ್ಥ: ಹೇ ಭಗವಂತ, ಎಲ್ಲಾ ಜೀವಿಗಳು ಸಂತೋಷವಾಗಿರಲ್ಲಿ, ಎಲ್ಲರೂ ಆರೋಗ್ಯವಂತರಾಗಿರಲ್ಲಿ, ಎಲ್ಲರೂ ಪರಸ್ಪರರ ಕ್ಷೇಮವನ್ನು ಕಾಣಲಿ. ಯಾರಿಗೂ ಎಂದಿಗೂ ದುಃಖವಾಗದಿರಲ್ಲಿ.) ಎಂಬುದು ಭಾರತೀಯ ಪ್ರಾಚೀನ ಋಷಿ-ಮುನಿಗಳ ಪ್ರಾರ್ಥನೆಯಾಗಿದೆ. ಪುಣ್ಯಭೂಮಿ ಭಾರತವು ಎಲ್ಲ ಧರ್ಮಗಳಿಗೆ ಆಶ್ರಯ ನೀಡಿದ ತಾಣವಾಗಿದೆ. ಪ್ರತಿಯೊಬ್ಬರು ಧರ್ಮಾಚರಣೆಯನ್ನು ಮಾಡುವ ಮೂಲಕ ಸಾತ್ವಿಕ ಸಮಾಜ ನಿರ್ಮಾಣ ಮಾಡುವುದು ಇಂದು ಅವಶ್ಯಕತೆವಿದೆ ಎಂದು ಹೇಳಿದರು.
ಈ ವೇಳೆ ಕ್ರೈಸ್ತ ಹಾಗೂ ಇಸ್ಲಾಂ ಧರ್ಮದ ಪ್ರತಿನಿಧಿಗಳು ತಮ್ಮ ವಿಚಾರವನ್ನು ಮಂಡಿಸಿದರು. ಸುಮಾರು ೪೦೦ ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಲಾಭವನ್ನು ಪಡೆದುಕೊಂಡಿದ್ದಾರೆ.
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಶಾಮಲಿ (ಉತ್ತರಪ್ರದೇಶ) ಇಲ್ಲಿನ ಆಯುಷ ಮಲಿಕನಿಂದ ಇಸ್ಲಾಂ ತೊರೆದು ಪುನಃ ಹಿಂದೂ ಧರ್ಮ ಸ್ವೀಕಾರ ! : Shamili Love Jihad
ನಿಜಾಮಾಬಾದ್ (ತೆಲಂಗಾಣ): ಶಾಲೆಯಲ್ಲಿ ಹಿಂದೂ ವಿದ್ಯಾರ್ಥಿಗಳಿಗೆ ಉರ್ದು ಮತ್ತು ಕಲ್ಮಾ ಕಲಿಸುವುದಕ್ಕೆ ವಿರೋಧ
ವಿವಾಹಕ್ಕಾಗಿ ಮುಸ್ಲಿಂ ಯುವತಿಯಿಂದ ಇಸ್ಲಾಂ ಧರ್ಮ ಸ್ವೀಕರಿಸಲು ಒತ್ತಡ; ಹಿಂದು ಯುವಕನ ಆತ್ಮಹತ್ಯೆ!
ಪ್ರಾರ್ಥನೆ ಅಥವಾ ಮಂತ್ರಗಳನ್ನು ಹೇಳಲು ವಿದ್ಯಾರ್ಥಿಗಳು ಅಥವಾ ಪೋಷಕರ ಒಪ್ಪಿಗೆ ಅತ್ಯಗತ್ಯ! – IRS Nisha Oraon