ಶ್ರೀ ಪುರಂದರ ದಾಸರ ಪುಣ್ಯತಿಥಿ (ಫೆಬ್ರವರಿ ೧) ನಿಮಿತ್ತ…

ಶ್ರೀ ಪುರಂದರ ದಾಸರು ಕರ್ನಾಟಕ ಸಂಗೀತ ಪದ್ಧತಿಯ ಪಿತಾಮಹ ಎಂದು ಹೆಸರಾದವರು. ದಾಸ ಪದ್ಧತಿಯ ಅನೇಕ ಪ್ರಮುಖರು, ಮುಖ್ಯವಾಗಿ ಪುರಂದರದಾಸ, ಶ್ರೀಪಾದರಾಯ, ಕನಕದಾಸ, ಜಗನ್ನಾಥ ದಾಸ, ವಿಜಯದಾಸ ಮತ್ತು ಕಮಲೇಶ ವಿಠ್ಠಲ ಮೊದಲಾದವರು ಸಂಗೀತದ ಮೂಲಕ ಭಕ್ತಿಮಾರ್ಗವನ್ನು ಬೋಧಿಸಿದವರು. ಪುರಂದರದಾಸರ ಎಲ್ಲ ಕೀರ್ತನೆಗಳು ಪುರಂದರ ವಿಠ್ಠಲನನ್ನು (ವಿಷ್ಣು) ನಮಿಸುತ್ತಾ ಕೊನೆಗೊಳ್ಳುತ್ತವೆ.
ಸಾವಿರಾರು ಕೀರ್ತನೆಗಳನ್ನು ರಚಿಸಿದ ಪುರಂದರದಾಸರ ಸುಮಾರು ೧೦೦೦ ಕೀರ್ತನೆಗಳು ಇಂದಿಗೂ ಉಳಿದಿವೆ. ಇವರ ಎಲ್ಲ ಕೀರ್ತನೆಗಳೂ ಕನ್ನಡ ಭಾಷೆಯಲ್ಲಿದ್ದು ಭಕ್ತಿ ಮಾರ್ಗವನ್ನು ಜನಸಾಮಾನ್ಯರಿಗೆ ಪರಿಚಯ ಮಾಡಿಕೊಡುವ ಉದ್ದೇಶವನ್ನು ಹೊಂದಿವೆ. ಶ್ರೀ ಪುರಂದರದಾಸರು ೫ ಲಕ್ಷ ಹಾಡುಗಳನ್ನು ರಚನೆ ಮಾಡಬೇಕೆಂಬ ಉದ್ದೇಶವಿಟ್ಟುಕೊಂಡಿದ್ದರು, ಅವರು ೪,೭೫,೦೦೦ ಹಾಡುಗಳನ್ನು ರಚನೆ ಮಾಡಿ ಅವತಾರ ಮುಗಿಸಿದರು. ಅವರ ಮಗ ಮಧ್ವಪತಿ ದಾಸರು ಉಳಿದ ೨೫,೦೦೦ ಹಾಡುಗಳನ್ನು ರಚನೆ ಮಾಡಿದರು ಎಂದು ಹೇಳಲಾಗುತ್ತಿದೆ.
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಹಾರನಪುರ (ಉತ್ತರಪ್ರದೇಶ) ಇಲ್ಲಿನ ಶಹಜಾದ ಆದ ‘ಶಂಕರ!’
ಜೂನ್ ೧೯ ರಂದು ‘ರಾಷ್ಟ್ರೀಯ ಘರ್ ವಾಪ್ಸಿ ದಿನ’ ಎಂದು ಆಚರಿಸಿ!
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !