ದೆಹಲಿಯಲ್ಲಿ ಗಣರಾಜ್ಯೋತ್ಸವ ದಿನದಂದು ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ

  • ಅತ್ಯಾಚಾರದ ನಂತರ ಇತರೆ ಮಹಿಳೆಯರು ಬಾಲಕಿಯ ಕೇಶಮುಂಡನ ಮಾರಿ ಕೊರಳಿಗೆ ಚಪ್ಪಲಿ ಹಾಕಿ ರಸ್ತೆಯಲ್ಲಿ ಓಡಾಡಿಸಿದರು !

  • ಪೀಡಿತ ಬಾಲಕಿಯ ಸೇಡು ತೀರಿಸಿಕೊಳ್ಳಲು ಮಾಡಿದ ಕೃತ್ಯ !

ಭಾರತದ ಸಾಮಾಜಿಕ ಅವನತಿಗೆ ಹಿಡಿದ ಕೈಗನ್ನಡಿಯಾಗಿದೆ. ಈ ಆರೋಪಿಗಳನ್ನು ಬಂಧಿಸಿ ತ್ವರಿತಗತಿ ನ್ಯಾಯಾಲಯದಲ್ಲಿ ಮೊಕದ್ದಮೆ ನಡೆಸಿ ಇಂತಹವರಿಗೆ ಮರಣದಂಡನೆ ವಿಧಿಸಲು ಸರಕಾರ ಪ್ರಯತ್ನಿಸಬೇಕು, ಎಂದು ಜನರಿಗೆ ಅನಿಸುತ್ತದೆ !

ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಾಲಿವಾಲ್ ಪಕ್ಕದ ಚಿತ್ರದಲ್ಲಿ ಮಹಿಳೆಯರು ಆಕೆಯ ಕೇಶಮುಂಡನ ಮಾಡಿ ಬೀದಿಯಲ್ಲಿ ಓಡಾಡಿಸಿದ್ದಾರೆ. ಬಾಲಕಿಯ ಮುಖಕ್ಕೆ ಮಸಿ ಬಳಿದು ಚಪ್ಪಲಿ ಹಾರ ಹಾಕಿದ ಘಟನೆ

ನವ ದೆಹಲಿ : ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ಓರ್ವ ಹುಡುಗಿಯ ಸೇಡು ತೀರಿಸಿಕೊಳ್ಳಲು ಆಕೆಯನ್ನು ಮೂವರು ವ್ಯಕ್ತಿಗಳು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ, ನಂತರ ಇತರ ಮಹಿಳೆಯರು ಆಕೆಯ ಕೇಶಮುಂಡನ ಮಾಡಿ ಬೀದಿಯಲ್ಲಿ ಓಡಾಡಿಸಿದ್ದಾರೆ. ಬಾಲಕಿಯ ಮುಖಕ್ಕೆ ಮಸಿ ಬಳಿದು ಚಪ್ಪಲಿ ಹಾರ ಹಾಕಿದ ಘಟನೆ ನಡೆದಿದೆ. ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಾಲಿವಾಲ್ ಘಟನೆಯನ್ನು ಗಮನಿಸಿದ್ದು, ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಕರೆ ನೀಡಿದ್ದಾರೆ. ಈ ಪ್ರಕರಣದಲ್ಲಿ ನಾಲ್ವರು ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು, ವೈಯಕ್ತಿಕ ದ್ವೇಷದಿಂದ ಘಟನೆ ನಡೆದಿದೆ. ಪೀಡಿತೆಗೆ ಎಲ್ಲಾ ರೀತಿಯ ನೆರವು ಮತ್ತು ಸಮಾಲೋಚನೆ ನೀಡಲಾಗುತ್ತಿದೆ ಎಂದು ಹೇಳಿದರು.