(ಟಿಪ್ಪಣಿ : ಮೌಲ್ವಿ ಎಂದರೆ ಇಸ್ಲಾಂನ ಧಾರ್ಮಿಕ ನಾಯಕ)
‘ಭಾರತದಲ್ಲಿರುವ ಮುಸ್ಲಿಮರು ಅಸುರಕ್ಷಿತರಾಗಿದ್ದಾರೆ’, ಎಂದು ಕೂಗಾಡುವ ಜಾತ್ಯತೀತರು ಮತ್ತು ಪ್ರಗತಿ(ಅಧೋಗತಿ)ಪರರ ಗುಂಪು ಈ ಬಗ್ಗೆ ಏನಾದರೂ ಹೇಳುವರೇ ?

ಕರ್ಣಾವತಿ (ಗುಜರಾತ) – ಇಲ್ಲಿ ಜನವರಿ ೨೫ ರಂದು ನಡೆದ ಹಿಂದುತ್ವನಿಷ್ಠ ಕಿಶನ್ ಬೊಲಿಯಾ ಅವರ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ ಮೂವರನ್ನು ಬಂಧಿಸಿದ್ದಾರೆ. ಅದರಲ್ಲಿ ಓರ್ವ ಮೌಲ್ವಿ ಭಾಗಿಯಾಗಿದ್ದಾರೆ. ಈ ಹತ್ಯೆಯ ಹಿಂದೆ ಒಟ್ಟು ಇಬ್ಬರು ಮೌಲ್ವಿಗಳ ಹೆಸರು ಬೆಳಕಿಗೆ ಬಂದಿದೆ. ಮುಂಬಯಿಯ ಮೌಲ್ವಿಯು ಹತ್ಯೆಗೆ ಆದೇಶ ನೀಡಿದ್ದರೆ, ಕರ್ಣಾವತಿ ಮೌಲ್ವಿಯು ಆರೋಪಿಗಳಿಗೆ ಶಸ್ತ್ರಾಸ್ತ್ರ ಒದಗಿಸಿದ್ದರು. ಕರ್ಣಾವತಿಯ ಮೌಲ್ವಿಯನ್ನು ಬಂಧಿಸಲಾಗಿದೆ. ಕಿಶನ್ ಇತ್ತೀಚೆಗೆ ಪ್ರವಾದಿ ಮೊಹಮ್ಮದ್ ಅವರ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದರು. ಅದಕ್ಕಾಗಿ ಅವರಿಗೆ ಕೊಲೆಯ ಬೆದರಿಕೆ ಹಾಕಿದ್ದರು.
ಗುಜರಾತನ ಗೃಹ ಸಚಿವ ಹರ್ಷ ಸಂಘವಿಯವರು ಕಿಶನ್ ಬೋಲಿಯಾ ಅವರ ಮನೆಗೆ ಭೇಟಿ ನೀಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಘವಿ, ನಾವು ಕಿಶನ್ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಬಿಡುವುದಿಲ್ಲ. ಕಿಶನ್ನನ್ನು ಕೊಲ್ಲಲು ೨೦ ವರ್ಷದ ಇಬ್ಬರು ಆರೋಪಿಗಳನ್ನು ಮೌಲ್ವಿಯು ಪ್ರಚೋದಿಸಿದ್ದರು. ಮೌಲ್ವಿಯ ಕೆಲಸ ಜನರಿಗೆ ಸರಿಯಾದ ದಾರಿ ತೋರಿಸುವುದಾಗಿರುತ್ತದೆ; ಆದರೆ ಅವರು ಹತ್ಯೆಗೆ ಶಸ್ತ್ರಾಸ್ತ್ರಗಳನ್ನು ಒದಗಿಸಿರುವುದು ಅಚ್ಚರಿ ಮೂಡಿಸಿದೆ ಎಂದು ಹೇಳಿದರು.
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!