
ಕಳೆದ ಒಂದು ವಾರದಿಂದ ಉಡುಪಿ ಜಿಲ್ಲೆಯ ಶಾಲೆಗಳಲ್ಲಿ ಹಿಜಾಬ್ ವಿಷಯದಲ್ಲಿ ವಿವಾದ ಶುರುವಾಗಿದ್ದು, ಇದೀಗ ಹಿಜಾಬ್ ವಿಷಯದ ಮೂಲಕ ಕೋಮು ಗಲಭೆಯನ್ನು ಸೃಷ್ಟಿಸಲು ಬಹುದೊಡ್ಡ ಸಂಚು ರೂಪಿಸಿರುವುದನ್ನು ಪೋಲಿಸರು ವಿಫಲಗೊಳಿಸಿದ್ದಾರೆ. ಕುಂದಾಪುರ ಜೂನಿಯರ್ ಕಾಲೇಜಿನಲ್ಲಿ ಮುಸಲ್ಮಾನ ಯುವತಿಯರು ಪ್ರತಿಭಟನೆ ಮಾಡುವಾಗ, ಅವರಿಗೆ ಬೆಂಬಲ ನೀಡಲು ಮತಾಂಧರು ಮಾರಾಕಾಸ್ತ್ರಗಳನ್ನು ಹಿಡಿದು ಬಂದಿದ್ದು, 5 ಜನರಲ್ಲಿ ಇಬ್ಬರನ್ನು ಅಂದರೆ ಹಾಜಿ ಅಬ್ದುಲ್ ಮುಜಬ್ ಹಾಗೂ ರಜಬ್ನನ್ನು ಪೋಲಿಸರು ಬಂಧನ ಮಾಡಿದ್ದಾರೆ. ಉಳಿದ ಕಲೀಲ್, ಈಪಿಕರ್, ರಿಜ್ವಾನ್ ಪರಾರಿಯಾಗಿದ್ದಾರೆ. ಈ ವೇಳೆಯಲ್ಲಿ ಬಂಧಿತರಿಂದ ಅಪಾಯಕಾರಿ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸ್ ತನಿಖೆಯಲ್ಲಿ ಬಯಲಾದ ವಿಷಯವೇನೆಂದರೆ ಬಂಧಿತರು ರೌಡಿಶೀಟರ್ ಆಗಿದ್ದು, ಮಾರಕಾಸ್ತ್ರಗಳನ್ನು ಬೀಸಿ ಸಾರ್ವಜನಿಕರ ಪ್ರಾಣ ತೆಗೆಯುವ ಸಂಚನ್ನು ರೂಪಿಸಿದ್ದರು. ಇದು ಅತ್ಯಂತ ಅಪಾಯಕಾರಿ ಮತ್ತು ಅತ್ಯಂತ ಗಂಭೀರ ವಿಷಯವಾಗಿದೆ. ಉಡುಪಿ ಜಿಲ್ಲೆಯು ಅತ್ಯಂತ ಕೋಮು ಸೂಕ್ಷ್ಮ ಪ್ರದೇಶವಾಗಿದೆ. ಮತಾಂಧ ಶಕ್ತಿಗಳು ಹಿಜಾಬ್ ಮೂಲಕ ಕೋಮು ಭಾವನೆಯನ್ನು ಕೆರಳಿಸಿ ಕೋಮು ಗಲಭೆಯನ್ನು ಮಾಡುವ ಷಡ್ಯಂತ್ರ್ಯ ರಚಿಸಿದ್ದು, ಇದರ ಪೂರ್ಣ ತನಿಖೆ ಮಾಡಬೇಕು ಮತ್ತು ಕೂಡಲೇ ಇದರ ಹಿಂದಿನ ಮೂಲ ರೂವಾರಿಯನ್ನು ಪತ್ತೆ ಹಚ್ಚಬೇಕು ಮತ್ತು ಯಾವುದೇ ಕಾರಣಕ್ಕೂ ಹಿಜಾಬ್ಗೆ ಅವಕಾಶ ನೀಡದೇ, ವಸ್ತ್ರಸಂಹಿತೆಯನ್ನು ಜಾರಿ ಮಾಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯು ಆಗ್ರಹಿಸುತ್ತದೆ.
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!
ಸೋಲಾಪುರದಲ್ಲಿ ಅನಧಿಕೃತ ಚರ್ಚ್ ಮತ್ತು ಮಹಾನಗರ ಪಾಲಿಕೆ ನೌಕರನ ಅಕ್ರಮಗಳ ತನಿಖೆ!
ನಿಜಾಮಾಬಾದ್ (ತೆಲಂಗಾಣ): ಶಾಲೆಯಲ್ಲಿ ಹಿಂದೂ ವಿದ್ಯಾರ್ಥಿಗಳಿಗೆ ಉರ್ದು ಮತ್ತು ಕಲ್ಮಾ ಕಲಿಸುವುದಕ್ಕೆ ವಿರೋಧ
ವಿವಾಹಕ್ಕಾಗಿ ಮುಸ್ಲಿಂ ಯುವತಿಯಿಂದ ಇಸ್ಲಾಂ ಧರ್ಮ ಸ್ವೀಕರಿಸಲು ಒತ್ತಡ; ಹಿಂದು ಯುವಕನ ಆತ್ಮಹತ್ಯೆ!