ಮಹಾವಿದ್ಯಾಲಯದ ಪ್ರಾಧ್ಯಾಪಕರನ್ನು ಕೊಲ್ಲುವ ಬೆದರಿಕೆ
|
* ಹಿಜಾಬಿನ ವಾದವು ಈಗ ಹತ್ಯೆಯ ಹಂತದ ವರೆಗೆ ತಲುಪಿದೆ, ಇದರಿಂದ ಇದರ ಹಿಂದೆ ಜಿಹಾದಿ ಷಡ್ಯಂತ್ರವಿದೆ, ಎಂಬುದು ಸ್ಪಷ್ಟವಾಗುತ್ತದೆ. ಕರ್ನಾಟಕದಲ್ಲಿನ ಭಾಜಪ ಸರಕಾರವು ಈ ಷಡ್ಯಂತ್ರವನ್ನು ಧ್ವಂಸಗೊಳಿಸಬೇಕಿದೆ, ಎಂದು ಹಿಂದೂಗಳಿಗೆ ಅನಿಸುತ್ತದೆ ! – ಸಂಪಾದಕರು * ಸರಕಾರವು ನ್ಯಾಯಾಲಯದ ಆದೇಶದ ವಿರುದ್ಧ ಮಹಾವಿದ್ಯಾಲಯಗಳಲ್ಲಿ ಹಿಜಾಬ ಧರಿಸಿ ಬರುವವರ ವಿರುದ್ಧ ಅಪರಾಧವನ್ನು ದಾಖಲಿಸಿ ಅವರನ್ನು ಏಕೆ ಬಂಧಿಸುತ್ತಿಲ್ಲ ? – ಸಂಪಾದಕರು |

ಮಡಿಕೇರಿ (ಕರ್ನಾಟಕ) – ಹಿಜಾಬ ಧರಿಸಿ ಬಂದಂತಹ ಮುಸಲ್ಮಾನ ವಿದ್ಯಾರ್ಥಿನಿಯರಿಗೆ ಪ್ರವೇಶವನ್ನು ನಿರಾಕರಿಸಿದ್ದರಿಂದ ಅಲ್ಲಿನ ಒಂದು ಮಹಾವಿದ್ಯಾಲಯದ ವಿಜಯ ಎಂಬ ಹೆಸರಿನ ಪ್ರಾಧ್ಯಾಪಕರನ್ನು ಕೊಲ್ಲುವುದಾಗಿ ಬೆದರಿಕೆ ನೀಡಲಾಗಿದೆ. ಈ ವಿಷಯದಲ್ಲಿ ಪ್ರಾಧ್ಯಾಪಕರು ಪೊಲೀಸರ ಬಳಿ ದೂರನ್ನು ನೋಂದಾಯಿಸಿದ್ದಾರೆ. ಈ ಬೆದರಿಕೆಯನ್ನು ಸಾಮಾಜಿಕ ಮಾಧ್ಯಮಗಳಿಂದ ನೀಡಲಾಗಿರುವುದರಿಂದ ಸಾಯಬರ ಶಾಖೆಯ ಪೊಲೀಸರಿಂದ ಈ ವಿಷಯದಲ್ಲಿ ತನಿಖೆ ನಡೆಯುತ್ತಿದೆ.
https://t.co/e6K69ADpUX
ಹಿಜಾಬ್ (Hijab) ಧರಿಸಿಯೇ ತರಗತಿಗೆ ಪ್ರವೇಶಿಸಲು ಪ್ರಯತ್ನಿಸಿದ್ದ ವಿದ್ಯಾರ್ಥಿನಿಯರ (Students) ವಿರುದ್ಧ ಶುಕ್ರವಾರ ಗರಂ ಆಗಿದ್ದ ಪ್ರಾಂಶುಪಾಲರಿಗೆ ಸಾಮಾಜಿಕ ಜಾಲತಾಣದಲ್ಲಿ (Social Media) ಕೊಲೆ ಬೆದರಿಕೆ ಹಾಕಲಾಗಿದೆ.#HijabRow #Madikeri #KannadaNews— News18 Kannada (@News18Kannada) February 20, 2022
ಹಿಜಾಬಿನ ಹಿಂದೆ ಅಂತರಾಷ್ಟ್ರೀಯ ಭಯೋತ್ಪಾದನಾ ಸಂಘಟನೆಯ ಕೈವಾಡ ! – ಕಂದಾಯ ಮಂತ್ರಿಗಳಾದ ಆರ್. ಅಶೋಕರವರ ಹೇಳಿಕೆ

ಹಿಜಾಬಿನ ಪ್ರಕರಣದ ವಿಷಯದಲ್ಲಿ ರಾಜ್ಯ ಕಂದಾಯ ಮಂತ್ರಿಗಳಾದ ಆರ್. ಅಶೋಕರವರು ‘ಒಂದು ಚಿಕ್ಕ ನಗರವಾದ ಉಡುಪಿಯಲ್ಲಿ ನಡೆದ ಹಿಜಾಬಿನ ವಾದ ಒಂದೇ ವಾರದಲ್ಲಿ ಅಂತರಾಷ್ಟ್ರೀಯ ಮಟ್ಟವನ್ನು ತಲುಪಿರುವುದು ಹೇಗೆ ? ವಿದ್ಯಾರ್ಥಿಗಳು ಹೀಗೆ ಮಾಡಲಾರರು. ಇದರ ಹಿಂದೆ ಅಂತರಾಷ್ಟ್ಟೀಯ ಜಿಹಾದಿ ಭಯೋತ್ಪಾದಕ ಸಂಘಟನೆಗಳ ಪ್ರಮುಖ ಪಾತ್ರವಿದೆ. ಇದು ಒಂದು ಭಯೋತ್ಪಾದಕ ಸಂಘಟನೆಯ ಕೆಲಸವೇ ಆಗಿದೆ. ಈ ಸಂಘಟನೆಯು ಇರಾಕ, ಇರಾನ ಮತ್ತು ಪಾಕಿಸ್ತಾನಗಳಲ್ಲಿ ಸಕ್ರೀಯವಾಗಿದೆ. ಈ ಪ್ರಕರಣಕ್ಕೆ ಭಯೋತ್ಪಾದನೆಯೊಂದಿಗೆ ಇರುವ ಸಂಬಂಧವನ್ನು ಬಹಿರಂಗಗೊಳಿಸುವ ಆವಶ್ಯಕತೆಯಿದ್ದು ಅದನ್ನು ಬಹಿರಂಗಗೊಳಿಸಲಾಗುವುದು’ ಎಂದು ಹೇಳಿದರು.
Foreign interference escalated hijab row, says Karnataka minister R Ashok https://t.co/kgP4s7AR0M
— TOI Cities (@TOICitiesNews) February 19, 2022
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ