
ನವದೆಹಲಿ – ಯುಕ್ರೇನ್ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ಸರ್ವೋಚ್ಚ ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಲಾಗಿದೆ. ಈ ಅರ್ಜಿಯ ವಿಚಾರಣೆಯ ಸಮಯದಲ್ಲಿ ನ್ಯಾಯಾಧೀಶ ಎನ್.ವಿ. ರಮಣ ಇವರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋಗಳ ಉದಾಹರಣೆ ನೀಡಿದರು. ಈ ವಿಡಿಯೋದಲ್ಲಿ ‘ಯುದ್ಧಜನ್ಯ ಯುಕ್ರೇನ್ನಿಂದ ಭಾರತೀಯರಿಗೆ ಹಿಂತಿರುಗಿ ಕರೆತರಲು ನ್ಯಾಯಾಧೀಶರು ಏನು ಮಾಡಿದ್ದಾರೆ ?’, ಎಂದು ಜನರು ಪ್ರಶ್ನೆ ಕೇಳಿದ್ದಾರೆ. ಈ ಬಗ್ಗೆ ನ್ಯಾಯಾಧೀಶರು, “ನಾನು ರಷ್ಯಾದ ರಾಷ್ಟ್ರಧ್ಯಕ್ಷ ವ್ಲಾದಿಮೀರ ಪುತಿನ್ ಇವರಿಗೆ ಯುದ್ಧ ನಿಲ್ಲಿಸಲು ಆದೇಶ ನೀಡಬೇಕೇ ?, ಎಂಬ ಪ್ರಶ್ನೆ ಕೇಳಿದರು. ಯುಕ್ರೇನ್ನ ಗಡಿಯಲ್ಲಿ ಸಿಲುಕಿರುವ 200 ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳನ್ನು ರಕ್ಷಿಸುವ ಸಂದರ್ಭದಲ್ಲಿ ಅರ್ಜಿ ದಾಖಲಿಸಲಾಗಿತ್ತು.
‘Can I give directions to #VladimirPutin to stop war?’: CJI Ramana asks petitionerhttps://t.co/Bgi8ATxv37 #Russia #Ukraine #RussiaUkraineWar
— India TV (@indiatvnews) March 3, 2022
ನ್ಯಾಯಾಧೀಶರು ತಮ್ಮ ಮಾತನ್ನು ಮುಂದುವರೆಸುತ್ತಾ, ನಮಗೆ ವಿದ್ಯಾರ್ಥಿಗಳ ಬಗ್ಗೆ ಸಹಾನುಭೂತಿಯಿದೆ. ಭಾರತ ಸರಕಾರ ಅದಕ್ಕಾಗಿ ಕೆಲಸ ಮಾಡುತ್ತಿದೆ. ಆದರೆ ನಾವು `ಅಟಾರ್ನಿ ಜನರಲ್’ ಇವರಿಗೆ `ಈ ವಿಷಯವಾಗಿ ಏನು ಮಾಡಬಹುದು’, ಎಂದು ಕೇಳುವೆವು ಎಂದು ಹೇಳಿದರು.
Teesta River Project : ಭಾರತವನ್ನು ಬದಿಗೊತ್ತಿ ಚೀನಾಕ್ಕೆ ೯ ಸಾವಿರ ಕೋಟಿ ರೂಪಾಯಿಗಳ ತೀಸ್ತಾ ನದಿ ಯೋಜನೆ ಒಪ್ಪಿಸಿದ ಬಾಂಗ್ಲಾದೇಶ !
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ