
ಪನವೆಲ್ – ತತ್ತ್ವನಿಷ್ಠ, ಆಜ್ಞಾಪಾಲನೆ, ಸ್ಥಿರತೆ, ನಮ್ರತೆ, ಅಂತರ್ಮುಖತೆ, ಸಮರ್ಪಣಾ ಭಾವದಿಂದ ಸೇವೆ ಮಾಡುವುದು ಹೀಗೆ ಅನೇಕ ಗುಣರತ್ನಗಳ ಗಣಿಯಾಗಿರುವ ತಿವರೆ (ರಾಜಾಪುರ ತಾಲೂಕು, ರತ್ನಾಗಿರಿ ಜಿಲ್ಲೆ)ಯಲ್ಲಿನ ಹಾಗೂ ಪ್ರಸ್ತುತ ಸನಾತನದ ದೇವದ ಆಶ್ರಮದಲ್ಲಿ ವಾಸವಾಗಿರುವ ಪೂ. (ಸುಶ್ರೀ) ರತ್ನಮಾಲಾ ದಳವಿ (೪೫ ವರ್ಷ) ಇವರು ಮಾರ್ಚ್ ೬ ರಂದು ಸನಾತನದ ೧೧೮ ನೇ ಸಮಷ್ಟಿ ಸಂತ ಪದವಿಯಲ್ಲಿ ವಿರಾಜಮಾನರಾದರು. ಸನಾತನದ ದೇವದ ಆಶ್ರಮದಲ್ಲಿ ನೆರವೇರಿದ ಭಾವ ಸಮಾರಂಭದಲ್ಲಿ ಸನಾತನದ ೬೯ ನೇ ಸಂತ ಪೂ. (ಸೌ.) ಅಶ್ವಿನಿ ಪವಾರ ಇವರು ಈ ಆನಂದವಾರ್ತೆಯನ್ನು ಘೋಷಿಸಿದರು. ಇದನ್ನು ಕೇಳಿ ಎಲ್ಲರಿಗೂ ಆನಂದವಾಯಿತು ಮತ್ತು ಗುರುಗಳ (ಪರಾತ್ಪರ ಗುರು ಡಾ. ಆಠವಲೆ) ಬಗ್ಗೆ ಕೃತಜ್ಞತೆ ವ್ಯಕ್ತವಾಯಿತು.

ಪೂ. (ಸೌ.) ಅಶ್ವಿನಿ ಪವಾರ ಇವರು ಪ್ರತಿಯೊಂದು ಸೇವೆಯನ್ನು ಜವಾಬ್ದಾರಿಯಿಂದ ನಿರ್ವಹಿಸುವ ಪೂ. (ಸುಶ್ರೀ)ರತ್ನಮಾಲಾ ದಳವಿ ಇವರಿಗೆ ಉಡುಗೊರೆಯನ್ನು ನೀಡಿ ಸನ್ಮಾನಿಸಿದರು. ಈ ಭಾವಸಮಾರಂಭದಲ್ಲಿ ದೇವದ ಆಶ್ರಮದ ಸದ್ಗುರುಗಳು, ಸಂತರು ಹಾಗೂ ಸಾಧಕರು ಉಪಸ್ಥಿತರಿದ್ದರು.

ಈ ಭಾವ ಸಮಾರಂಭದಲ್ಲಿ ಪೂ. (ಸುಶ್ರೀ) ರತ್ನಮಾಲಾ ದಳವಿ ಇವರ ಸಂಬಂಧಿಕರು ‘ಆನ್ಲೈನ್’ ಮೂಲಕ ಪಾಲ್ಗೊಂಡಿದ್ದರು.
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !
ಸಾಧನೆಯಿಂದ ಸಾಧಕರಲ್ಲಿ ಚೈತನ್ಯ ಮತ್ತು ದೈವೀ ಗುಣಗಳು ಹೆಚ್ಚಳವಾಗುವುದು ಹಾಗೂ ಸಮಾಜದ ವ್ಯಕ್ತಿಗಳು ಸಾಧಕರ ಕಡೆಗೆ ಆಕರ್ಷಿತರಾಗುವುದು
ಆಧ್ಯಾತ್ಮಿಕ ಉಪಾಯಗಳ ವಿಷಯದಲ್ಲಿ ಇದನ್ನು ನೆನಪಿನಲ್ಲಿಡಿ !