ಈ ತೀರ್ಪು ದೇಶದ ಪ್ರತಿಯೊಂದು ದೇವಸ್ಥಾನದಲ್ಲಿ ಜಾರಿಯಾಗಬೇಕೆಂದು ಭಕ್ತರ ಅನಿಸಿಕೆ !

ಚೆನ್ನೈ (ತಮಿಳುನಾಡು) – ದೇವಸ್ಥಾನಗಳ ಪಾವಿತ್ರ್ಯವನ್ನು ಕಾಪಾಡಲು ಭಕ್ತರು ಯೋಗ್ಯವಾದ ಉಡುಪನ್ನು ಧರಿಸಿಯೇ ದೇವಸ್ಥಾನವನ್ನು ಪ್ರವೇಶಿಸಬೇಕು. ನ್ಯಾಯಾಲಯವು ತನ್ನ ಅಭಿಪ್ರಾಯವನ್ನು ಸಮಾಜದ ಮೇಲೆ ಹೇರಲು ಸಾಧ್ಯವಿಲ್ಲ. ಪೂಜಾ ಸ್ಥಳಗಳಲ್ಲಿ ಪ್ರವೇಶಿಸುವಾಗ ಮತ್ತು ಅಲ್ಲಿಯ ಪರಂಪರೆಗೆ ಅನುಗುಣವಾಗಿ ಯಾವುದಾದರೂ ಉಡುಪು ಅವಶ್ಯಕವಾಗಿದ್ದರೆ ಆಗ ಅದೇ ಉಡುಪನ್ನು ಧರಿಸಬೇಕು, ಎಂದು ಮದ್ರಾಸ್ ಉಚ್ಚ ನ್ಯಾಯಾಲಯ ತೀರ್ಪು ನೀಡಿದೆ. ‘ಯಾವ ದೇವಸ್ಥಾನಗಳಲ್ಲಿ ಉಡುಪಿನ ಬಂಧನವಿದೆ, ಅವರು ದೇವಸ್ಥಾನದ ಹೊರಗೆ ಸೂಚನಾ ಫಲಕಗಳಲ್ಲಿ ಮಾಹಿತಿ ನೀಡಬೇಕು’ ಎಂದು ನ್ಯಾಯಾಲಯ ಹೇಳಿದೆ. ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ (ಡ್ರೆಸ್ ಕೋಡ್) ಅನಿವಾರ್ಯಗೊಳಿಸಲು, ಆದೇಶಿಸುವಂತೆ ಒಂದು ಅರ್ಜಿಯನ್ನು ನ್ಯಾಯಾಲಯದಲ್ಲಿ ಸಲ್ಲಿಸಲಾಗಿತ್ತು. ಪುರುಷರಿಗೆ ಪಂಚೆ-ಕುರ್ತಾ, ಮಹಿಳೆಯರಿಗಾಗಿ ಸೀರೆ ಅಥವಾ ಸಲ್ವಾರ್ ಕಮೀಜ್ ಮತ್ತು ಹಣೆಯ ಮೇಲೆ ಸನಾತನ ಧರ್ಮದ ಚಿಹ್ನೆ ಕಡ್ಡಾಯ ಮಾಡಲು ಒತ್ತಾಯಿಸಲಾಗಿತ್ತು. ಈ ಬಗ್ಗೆ ನ್ಯಾಯಾಲಯವು ತೀರ್ಪು ನೀಡಿದೆ.
ಸಹಾರನಪುರ (ಉತ್ತರಪ್ರದೇಶ) ಇಲ್ಲಿನ ಶಹಜಾದ ಆದ ‘ಶಂಕರ!’
Telegram App Ban : ‘ಟೆಲಿಗ್ರಾಂ’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧ ಮುಂದುವರಿಕೆ! – ದೆಹಲಿ ಹೈಕೋರ್ಟ್
ಜೂನ್ ೧೯ ರಂದು ‘ರಾಷ್ಟ್ರೀಯ ಘರ್ ವಾಪ್ಸಿ ದಿನ’ ಎಂದು ಆಚರಿಸಿ!
ಹಿಂದೂ ಧರ್ಮದ ನೋಂದಣಿಯೂ ಆಗಿಲ್ಲ! – RSS Chief Mohan Bhagvat
ಪಿ.ಎಫ್.ಐ.ನ ಮೂವರು ಸದಸ್ಯರಿಗೆ ಜಾಮೀನು ನಿರಾಕರಿಸಿದ ಮುಂಬಯಿ ಉಚ್ಚ ನ್ಯಾಯಾಲಯ
ಕಟ್ಟರವಾದಿಗಳ ಒತ್ತಡಕ್ಕೆ ಮಣಿದು ‘ಸನಾತನ ಧರ್ಮ ಸಂಕುಲ’ದ ನಿರ್ಮಾಣ ಕಾರ್ಯ ಸ್ಥಗಿತ!