ಹಿಂದೂ ಜನಜಾಗೃತಿ ಸಮಿತಿಯಿಂದ ಕೋಡಿಕೆರೆ ಗ್ರಾಮದಲ್ಲಿ (ಮಂಗಳೂರು ತಾ.) ಹಿಂದೂ ರಾಷ್ಟ್ರಜಾಗೃತಿ ಸಭೆ

ಮಂಗಳೂರು – ಹಿಂದೂಗಳು ಇಂದು ಸಂಘಟಿತರಾಗಬೇಕಾಗಿದೆ. ದೇಶದ ಎಲ್ಲ ಸಂಘಟನೆಗಳು ಒಟ್ಟಾದರೆ ಮಾತ್ರ ದೇಶದಲ್ಲಿ ಹಿಂದೂ ರಾಷ್ಟ್ರ ಬರಲು ಸಾಧ್ಯ. ಹಿಂದೂಗಳಿಗೆ ಧರ್ಮಶಿಕ್ಷಣದ ಆವಶ್ಯಕತೆ ತುಂಬ ಇದೆ. ಸನಾತನ ಸಂಸ್ಥೆಯು ಧರ್ಮಶಿಕ್ಷಣವನ್ನು ನೀಡುತ್ತಿರುವುದು ಒಳ್ಳೆಯ ಭಾಗವಾಗಿದೆ, ಎಂದು ಸಂಸ್ಕಾರ ಭಾರತಿ, ದಕ್ಷಿಣ ಕನ್ನಡ ಅಧ್ಯಕ್ಷರಾದ ಶ್ರೀ. ತಾರಾನಾಥ್ ಕೊಟ್ಟಾರಿ ಇವರು ತಿಳಿಸಿದರು. ಅವರು ಮಂಗಳೂರು ತಾಲುಕಿನ ಕೋಡಿಕೆರೆ ಗ್ರಾಮದ `ಪೆರ್ಮುದೆ ಹಿಂದೂ ಅನುಧಾನಿತ ಹಿರಿಯ ಪ್ರಾಥಮಿಕ ಶಾಲೆ’ಯಲ್ಲಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಆಯೊಜಿಸಲಾದ ಹಿಂದೂ ರಾಷ್ಟ್ರ ಜಾಗೃತಿ ಸಭೆಯಲ್ಲಿ ಮಾತನಾಡುತ್ತಿದ್ದರು.

ಶಂಖನಾದದಿಂದ ಆರಂಭವಾದ ಸಭೆಯನ್ನು ಶ್ರೀ. ತಾರಾನಾಥ್ ಕೊಟ್ಟಾರಿ ಇವರು ದೀಪಪ್ರಜ್ವಲನೆ ಮಾಡಿ ಉದ್ಘಾಟಿಸಿದರು. ಈ ವೇಳೆ ಹಿಂದೂ ಜನಜಾಗೃತಿ ಸಮಿತಿಯ ಶ್ರೀ. ಚಂದ್ರ ಮೊಗೇರ ಇವರೂ ಉಪಸ್ಥಿತರಿಗೆ ಮಾರ್ಗದರ್ಶನ ಮಾಡಿದರು. ಕು ರಂಜಿತಾ ಇವರು ಸೂತ್ರಸಂಚಾಲನೆ ಮಾಡಿದರು.
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!