
ಬೆಂಗಳೂರು – ಹಿಂದೂಗಳು ಹಲಾಲ್ ಮಾಂಸವನ್ನು ತಿನ್ನಬಾರದು, ಇದು ಸಮಾಜದ ವಿಶೇಷ ವರ್ಗಕ್ಕಾಗಿ ಇದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಅವರು ತಮ್ಮ ಮಾತನ್ನು ಮುಂದುವರೆಸುತ್ತಾ, “ಮುಸ್ಲಿಮರು ಹಲಾಲ್ ಮಾಂಸವನ್ನು ತಿನ್ನುವುದಕ್ಕೆ ನಮಗೆ ಅಭ್ಯಂತರವಿಲ್ಲ; ಆದರೆ ಅದನ್ನು ತಿನ್ನುವಂತೆ ಹಿಂದೂಗಳನ್ನು ಒತ್ತಾಯಿಸುವುದು ಸರಿಯಲ್ಲ. ಹಲಾಲ್ ಮಾಂಸಕ್ಕಾಗಿ ಬೇಕಾಗುವ ಪ್ರಮಾಣಪತ್ರದ ಬೇಡಿಕೆಯಲ್ಲಿ ಹೆಚ್ಚಳವಾಗಿದೆ. ಈ ಪ್ರಕರಣ ಪ್ರಸ್ತುತ ತನಿಖೆಯಲ್ಲಿದೆ. ಈ ವಿಚಾರದಲ್ಲಿ ಸಾರ್ವಜನಿಕರ ಅಭಿಪ್ರಾಯ ಪಡೆಯಬೇಕು ಎಂದು ಹೇಳಿದರು.
(ಸೌಜನ್ಯ : VIJAYAVANI)
ಎಲ್ಲರಿಗೂ ಹಲಾಲ್ ಮಾಂಸ ತಿನ್ನಿಸುವ ಭಾವನೆ ಸರಿಯಲ್ಲ: ಶೋಭಾ ಕರಂದ್ಲಾಜೆ https://t.co/GWLxwjO62r#ShobhaKarandlaje #Halal #Udupi #BJP #Congress @ShobhaBJP
— PublicTV (@publictvnews) April 3, 2022
ಹಿಂದೂಗಳ ಮೇಲೆ ಹಲಾಲ್ ಮಾಂಸ ಕಡ್ಡಾಯಗೊಳಿಸುವುದು ತಪ್ಪು ! – ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ
(ಸೌಜನ್ಯ : Public TV)
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಮಾತನಾಡುತ್ತಾ, “ಹಲಾಲ್ ಪರಿಕಲ್ಪನೆಯನ್ನು ಕೆಲವರು ಅದರಲ್ಲೂ ಕೆಲ ಸಂಘಟನೆಗಳು ಹುಟ್ಟು ಹಾಕಿವೆ. ಆದ್ದರಿಂದ ಕರ್ನಾಟಕದ ಜನತೆಗೆ ತೊಂದರೆಯಾಗುತ್ತಿದೆ. ಮುಸ್ಲಿಮರು ಹಲಾಲ್ ಮಾಂಸವನ್ನು ತಿನ್ನಲು ಬಯಸಿದರೆ, ಅವರು ಅದನ್ನು ತಿನ್ನಬೇಕು; ಆದರೆ ಅದನ್ನು ಹಿಂದೂಗಳ ಮೇಲೆ ಹೇರುವುದು ತಪ್ಪು ಎಂದು ಹೇಳಿದರು. ಇದಕ್ಕೂ ಮುನ್ನ ಭಾಜಪ ಮುಖಂಡ ಸಿ.ಟಿ. ರವಿ ಸೇರಿ ಇತರ ನಾಯಕರು ಕೂಡ ಹಿಂದೂಗಳು ಹಲಾಲ್ ಮಾಂಸ ತಿನ್ನಬಾರದು ಎಂದು ಹೇಳಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಅಕ್ರಮ ವಲಸಿಗರ ಸಂಖ್ಯೆ 13 ಸಾವಿರಕ್ಕೂ ಹೆಚ್ಚು! – ರಾಜ್ಯ ಗೃಹ ಇಲಾಖೆಯ ವರದಿಯ ಮಾಹಿತಿ
ಅಚಲಪುರ (ಅಮರಾವತಿ ಜಿಲ್ಲೆ) ಇಲ್ಲಿನ ಐತಿಹಾಸಿಕ ಶ್ರೀರಾಮ ಮಂದಿರ ಸಂಸ್ಥಾನದ 10 ಕೋಟಿ ರೂಪಾಯಿ ಮೌಲ್ಯದ ಭೂಮಿಯ ಮೇಲಿನ ಅತಿಕ್ರಮಣದಾರರ ದಾವೆ ವಜಾ! : Achalapur Sri Rama Temple
ರಿವಾ (ಮಧ್ಯಪ್ರದೇಶ)ದಲ್ಲಿ ಗೋ-ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ಮುಸ್ಲಿಂ ಸಹೋದರಿಯರನ್ನು ಹಿಡಿದ ಗ್ರಾಮಸ್ಥರು : Rewa Beef Smuggling Arrests
ನ್ಯಾಯಾಲಯದ ಬೇಸಿಗೆ ರಜೆಗಳ ನಂತರ ವಿಚಾರಣೆಯಾದರೆ ಆಕಾಶವೇನೂ ಕಳಚಿ ಬೀಳುವುದಿಲ್ಲ! : Supreme Court
man ki baat : ಇಂಧನ ಉಳಿತಾಯ ಮಾಡಿ ಮತ್ತು ಚಿನ್ನ ಖರೀದಿ ಸೀಮಿತವಾಗಿಡಿ !
ಫೋರ್ಟ್ (ಮುಂಬಯಿ) ನಲ್ಲಿನ ಸರಕಾರಿ ಜಾಗದ ಪ್ರಕರಣದಲ್ಲಿ ಚರ್ಚ್ಗೆ ಜಿಲ್ಲಾಧಿಕಾರಿಗಳಿಂದ ಬಾಕಿ ಹಣ ವಸೂಲಾತಿಯ ನೋಟಿಸ್ !