
ಬೆಂಗಳೂರು – ಹಿಂದೂಗಳು ಹಲಾಲ್ ಮಾಂಸವನ್ನು ತಿನ್ನಬಾರದು, ಇದು ಸಮಾಜದ ವಿಶೇಷ ವರ್ಗಕ್ಕಾಗಿ ಇದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಅವರು ತಮ್ಮ ಮಾತನ್ನು ಮುಂದುವರೆಸುತ್ತಾ, “ಮುಸ್ಲಿಮರು ಹಲಾಲ್ ಮಾಂಸವನ್ನು ತಿನ್ನುವುದಕ್ಕೆ ನಮಗೆ ಅಭ್ಯಂತರವಿಲ್ಲ; ಆದರೆ ಅದನ್ನು ತಿನ್ನುವಂತೆ ಹಿಂದೂಗಳನ್ನು ಒತ್ತಾಯಿಸುವುದು ಸರಿಯಲ್ಲ. ಹಲಾಲ್ ಮಾಂಸಕ್ಕಾಗಿ ಬೇಕಾಗುವ ಪ್ರಮಾಣಪತ್ರದ ಬೇಡಿಕೆಯಲ್ಲಿ ಹೆಚ್ಚಳವಾಗಿದೆ. ಈ ಪ್ರಕರಣ ಪ್ರಸ್ತುತ ತನಿಖೆಯಲ್ಲಿದೆ. ಈ ವಿಚಾರದಲ್ಲಿ ಸಾರ್ವಜನಿಕರ ಅಭಿಪ್ರಾಯ ಪಡೆಯಬೇಕು ಎಂದು ಹೇಳಿದರು.
(ಸೌಜನ್ಯ : VIJAYAVANI)
ಎಲ್ಲರಿಗೂ ಹಲಾಲ್ ಮಾಂಸ ತಿನ್ನಿಸುವ ಭಾವನೆ ಸರಿಯಲ್ಲ: ಶೋಭಾ ಕರಂದ್ಲಾಜೆ https://t.co/GWLxwjO62r#ShobhaKarandlaje #Halal #Udupi #BJP #Congress @ShobhaBJP
— PublicTV (@publictvnews) April 3, 2022
ಹಿಂದೂಗಳ ಮೇಲೆ ಹಲಾಲ್ ಮಾಂಸ ಕಡ್ಡಾಯಗೊಳಿಸುವುದು ತಪ್ಪು ! – ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ
(ಸೌಜನ್ಯ : Public TV)
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಮಾತನಾಡುತ್ತಾ, “ಹಲಾಲ್ ಪರಿಕಲ್ಪನೆಯನ್ನು ಕೆಲವರು ಅದರಲ್ಲೂ ಕೆಲ ಸಂಘಟನೆಗಳು ಹುಟ್ಟು ಹಾಕಿವೆ. ಆದ್ದರಿಂದ ಕರ್ನಾಟಕದ ಜನತೆಗೆ ತೊಂದರೆಯಾಗುತ್ತಿದೆ. ಮುಸ್ಲಿಮರು ಹಲಾಲ್ ಮಾಂಸವನ್ನು ತಿನ್ನಲು ಬಯಸಿದರೆ, ಅವರು ಅದನ್ನು ತಿನ್ನಬೇಕು; ಆದರೆ ಅದನ್ನು ಹಿಂದೂಗಳ ಮೇಲೆ ಹೇರುವುದು ತಪ್ಪು ಎಂದು ಹೇಳಿದರು. ಇದಕ್ಕೂ ಮುನ್ನ ಭಾಜಪ ಮುಖಂಡ ಸಿ.ಟಿ. ರವಿ ಸೇರಿ ಇತರ ನಾಯಕರು ಕೂಡ ಹಿಂದೂಗಳು ಹಲಾಲ್ ಮಾಂಸ ತಿನ್ನಬಾರದು ಎಂದು ಹೇಳಿಕೆ ನೀಡಿದ್ದಾರೆ.
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ