
ಡೆಹರಾಡೂನ್ (ಉತ್ತರಾಖಂಡ) – ರಾಜ್ಯದ ರೂಡಕೀ ರೈಲ್ವೆ ಸ್ಟೇಷನ್ ಅಧಿಕಾರಿಗಳಿಗೆ ಬೆದರಿಕೆಯ ಪತ್ರ ದೊರೆತಿದ್ದು ಅದರಲ್ಲಿ ಮೆ ೨೧ ರ ನಂತರ ಹರಿದ್ವಾರದ ಮಂಶಾದೇವಿ ಮತ್ತು ಚಂಡಿದೇವಿ ಇವುಗಳ ಜೊತೆಗೆ ಅನ್ಯ ಧಾರ್ಮಿಕ ಸ್ಥಳ, ಹಾಗೂ ಲಕ್ಷರ್, ನಜರಾಬಾದ್, ಡೆಹರಾಡೂನ್, ರೂಡಕೀ, ರಿಷಿಕೇಶ್ ಮತ್ತು ಹರಿದ್ವಾರದ ರೈಲ್ವೆ ಸ್ಟೇಷನಗಳ ಮೇಲೆ ಬಾಂಬು ದಾಳಿ ನಡೆಸಲಾಗುವ ಬೆದರಿಕೆ ಒಡ್ಡಲಾಗಿದೆ. ಪತ್ರ ಕಳಿಸುವನು ತನ್ನನ್ನು ಸಲೀಮ್ ಅನ್ಸಾರಿಯೆಂದು ಹೇಳಿ ಜೈಶ್-ಏ-ಮೊಹಮ್ಮದ್ ಉಗ್ರರ ಸಂಘಟನೆಯ ಏರ್ ಕಮಾಂಡರ್ ಆಗಿರುವುದಾಗಿ ನಮೂದಿಸಿದ್ದಾನೆ.
ಪತ್ರದಲ್ಲಿ ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ ಸಿಂಹ ಧಾಮಿ ಇವರನ್ನು ಗುರಿಯಾಗಿಸಬಹುದು ಎಂಬುವುದರ ಉಲ್ಲೇಖವಿದೆ ಎಂದು ಹೇಳಲಾಗುತ್ತಿದೆ. ಈ ಸಂದರ್ಭದಲ್ಲಿ ಉತ್ತರಾಖಂಡ ಮತ್ತು ಉತ್ತರ ಪ್ರದೇಶದ ರೈಲ್ವೆ ಸ್ಟೇಷನ್ ಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಸಂಪಾದಕೀಯ ನಿಲುವುಹಿಂದೂಗಳ ಧಾರ್ಮಿಕ ಸ್ಥಳಗಳು ಇವು ಯಾವಾಗಲೂ ಉಗ್ರರ ಗುರಿಯಾಗಿರುತ್ತವೆ. ಇದು ಸತ್ಯವಾಗಿದ್ದರು ‘ಉಗ್ರರಿಗೆ ಧರ್ಮ ಇರುವುದಿಲ್ಲ’ ಎಂದು ಹೇಳುವುದು ಶುದ್ಧ ಬೂಟಾಟಿಕೆ ಎಂದು ಅರಿಯಬೇಕು ! |
ನಾರಾಯಣಪುರ: ಕ್ರೈಸ್ತ ಧರ್ಮ ಸ್ವೀಕರಿಸಿದ ಆದಿವಾಸಿಗಳ ಗ್ರಾಮದಿಂದ ಬಹಿಷ್ಕಾರ
ಶ್ರೀರಾಮ ಮಂದಿರದ ದೇಣಿಗೆ (ಕಾಣಿಕೆ) ಹಣ ಕಳ್ಳತನದ ನಂತರ ಮಂದಿರದ ಸರಕಾರೀಕರಣ ಆಗುವ ಸಾಧ್ಯತೆ
ಶ್ರೀರಾಮಲಲ್ಲಾನ ಮೂರ್ತಿಯನ್ನು ಕೆತ್ತಿದ ಶಿಲ್ಪಿ ಅರುಣ ಯೋಗಿರಾಜ ಅವರ ಪ್ರತಿಕ್ರಿಯೆ!
“ದೋಷಿಗಳಿಗೆ ಕಠಿಣ ಶಿಕ್ಷೆಯಾಗಲೇಬೇಕು!” – ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಮಠ
‘ಜಗತ್ತಿನಾದ್ಯಂತ ತಂತ್ರಜ್ಞಾನ ಕ್ಷೇತ್ರವು ವೇಗವಾಗಿ ಮುನ್ನಡೆಯುತ್ತಿರುವಾಗ, ಸರಕಾರವು ‘ಐಐಟಿ’ (IIT) ಸಂಸ್ಥೆಗಳನ್ನು ಜ್ಯೋತಿಷ್ಯ, ಪುನರ್ಜನ್ಮ ಮುಂತಾದ ವಿಷಯಗಳ ಸಂಶೋಧನೆಯಲ್ಲಿ ತೊಡಗಿಸುತ್ತಿದೆ!’ (ಅಂತೆ)
ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ತಂದೆಯ ಹತ್ಯೆ ಮಾಡಿಸಿದ ಮಗನ ಬಂಧನ