
ಜಯಪುರ (ರಾಜಸ್ಥಾನ) – ರಾಜ್ಯದ ರಾಷ್ಟ್ರೀಯ ಆಯುರ್ವೇದ ಸಂಸ್ಥೆಯು ಮೇ ೨೩ ರಿಂದ ೨೭ರವರೆಗೆ ಪರಿಶಿಷ್ಟ ಜಾತಿಯವರಿಗೆ ಉಚಿತ ಆಯುರ್ವೇದ ಚಿಕಿತ್ಸಾ ಶಿಬಿರವನ್ನು ಆಯೋಜಿಸಿದೆ. ಸರಕಾರದ ಮಟ್ಟದಲ್ಲಿ ಮಾತ್ರ ಈ ವ್ಯವಸ್ಥೆ ಮಾಡಲಾಗಿದೆ.
ರಾಜ್ಯದ ಹಲವು ಗ್ರಾಮಗಳಲ್ಲಿ ವಿವಿಧ ಜಾತಿಯ ಜನರು ವಾಸಿಸುತ್ತಿದ್ದಾರೆ. ಹಾಗಾದರೆ ಬೇರೆ ಜಾತಿಯ ರೋಗಿಗಳು ಶಿಬಿರಕ್ಕೆ ಬಂದರೆ ಚಿಕಿತ್ಸೆ ನೀಡದೆ ವಾಪಸ ಕಳುಹಿಸುತ್ತಾರೆಯೇ ? ಎಂಬ ಪ್ರಶ್ನೆ ಕೇಳಿಬರುತ್ತಿದೆ. ಈ ಕುರಿತು ‘ರಾಷ್ಟ್ರೀಯ ಆಯುರ್ವೇದ ಸಂಸ್ಥೆ’ಯ ನಿರ್ದೇಶಕ ಸಂಜೀವ ವರ್ಮಾ ಮಾತನಾಡಿ, ಇಂತಹ ಶಿಬಿರಗಳಿಗೆ ಕೇಂದ್ರ ಸರಕಾರದಿಂದ ವಿಶೇಷ ಅನುದಾನ ನೀಡಲಾಗುತ್ತದೆ. ಅದಕ್ಕಾಗಿ ಗ್ರಾಮಗಳಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಜನರಿಗಾಗಿ ರಾಜ್ಯ ಸರಕಾರದಿಂದ ಇಂತಹ ಶಿಬಿರಗಳನ್ನು ಹಮ್ಮಿಕೊಳ್ಳಲಾಗುವುದು. ಇತರ ಜಾತಿಗಳ ಜನರಿಗೆ ಸಾಮಾನ್ಯ ಶಿಬಿರಗಳನ್ನು ಆಯೋಜಿಸಲಾಗುತ್ತಿರುತ್ತದೆ ಎಂದು ಹೇಳಿದರು.
ಸಂಪಾದಕೀಯ ನಿಲುವುಇಂತಹ ಶಿಬಿರಗಳು ಎಲ್ಲರಿಗೂ ಉಪಯೋಗವಾಗುವುದರಿಂದ ಎಲ್ಲರಿಗೂ ಏಕೆ ಆಯೋಜಿಸುತ್ತಿಲ್ಲ ? |
ನಾರಾಯಣಪುರ: ಕ್ರೈಸ್ತ ಧರ್ಮ ಸ್ವೀಕರಿಸಿದ ಆದಿವಾಸಿಗಳ ಗ್ರಾಮದಿಂದ ಬಹಿಷ್ಕಾರ
ಶ್ರೀರಾಮ ಮಂದಿರದ ದೇಣಿಗೆ (ಕಾಣಿಕೆ) ಹಣ ಕಳ್ಳತನದ ನಂತರ ಮಂದಿರದ ಸರಕಾರೀಕರಣ ಆಗುವ ಸಾಧ್ಯತೆ
ಶ್ರೀರಾಮಲಲ್ಲಾನ ಮೂರ್ತಿಯನ್ನು ಕೆತ್ತಿದ ಶಿಲ್ಪಿ ಅರುಣ ಯೋಗಿರಾಜ ಅವರ ಪ್ರತಿಕ್ರಿಯೆ!
“ದೋಷಿಗಳಿಗೆ ಕಠಿಣ ಶಿಕ್ಷೆಯಾಗಲೇಬೇಕು!” – ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಮಠ
‘ಜಗತ್ತಿನಾದ್ಯಂತ ತಂತ್ರಜ್ಞಾನ ಕ್ಷೇತ್ರವು ವೇಗವಾಗಿ ಮುನ್ನಡೆಯುತ್ತಿರುವಾಗ, ಸರಕಾರವು ‘ಐಐಟಿ’ (IIT) ಸಂಸ್ಥೆಗಳನ್ನು ಜ್ಯೋತಿಷ್ಯ, ಪುನರ್ಜನ್ಮ ಮುಂತಾದ ವಿಷಯಗಳ ಸಂಶೋಧನೆಯಲ್ಲಿ ತೊಡಗಿಸುತ್ತಿದೆ!’ (ಅಂತೆ)
ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ತಂದೆಯ ಹತ್ಯೆ ಮಾಡಿಸಿದ ಮಗನ ಬಂಧನ