|

ಮೊಹಾಲಿ (ಪಂಜಾಬ) – ಇಲ್ಲಿನ ಪಂಜಾಬ ಪೊಲೀಸರ ಗುಪ್ತಚರ ಇಲಾಖೆಯ ಕಚೇರಿಯಲ್ಲಿ ರಾಕೆಟ ಲಾಂಚರ ಮೂಲಕ ಗ್ರೆನೇಡ ಎಸೆದ ಆರೋಪದ ಮೆಲೆ ಖಲಿಸ್ತಾನಿ ಉಗ್ರ ನಿಶಾನ ಸಿಂಗನನ್ನು ಪೊಲೀಸರು ಬಂಧಿಸಿದ್ದಾರೆ. ಆತನಿಂದ ‘ರಾಕೆಟ ಪ್ರೊಪೆಲ್ಡ ಗ್ರೆನೇಡ ಲಾಂಚರ’ನ್ನು ಸಹ ವಶಪಡಿಸಿಕೊಳ್ಳಲಾಗಿದೆ. ನಿಶಾನ ಸಿಂಗ ಪಂಜಾಬನ ತರಣತಾರಣದಲ್ಲಿರುವ ಭಿಖಿವಿಂಡ ಗ್ರಾಮದ ನಿವಾಸಿಯಾಗಿದ್ದಾನೆ. ಈ ಗ್ರಾಮ ಪಾಕಿಸ್ತಾನದ ಗಡಿಯ ಸಮೀಪದಲ್ಲಿದೆ. ಮೊಹಾಲಿ ಮತ್ತು ಫರಿದಕೋಟನ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಫರಿದಕೋಟನಿಂದ ಬಂಧಿಸಿದ್ದಾರೆ.
ಪಂಜಾಬ್ ಪೊಲೀಸ್ ಕಚೇರಿ ಮೇಲೆ ರಾಕೆಟ್ ಗ್ರೆನೇಡ್ ದಾಳಿ#Punjab #Blast #Police https://t.co/bCdzznmqlt
— Asianet Suvarna News (@AsianetNewsSN) May 10, 2022
ಕುಖ್ಯಾತ ಗೂಂಡಾ ಮತ್ತು ಖಲಿಸ್ತಾನಿ ಭಯೋತ್ಪಾದಕ ಹರವಿಂದರ ಸಿಂಗ ಅಲಿಯಾಸ್ ರಿಂದಾ ಇವನ ಕೈವಾಡವಿದೆಯೆಂದು ಹೇಳಲಾಗುತ್ತಿದೆ. ರಿಂದಾ ಈ ‘ರಾಕೆಟ ಲಾಂಚರ’ ನ್ನು ಡ್ರೋನ ಮೂಲಕ ಪಂಜಾಬಗೆ ಕಳುಹಿಸಿದ್ದ ಎಂದು ಹೇಳಲಾಗುತ್ತಿದೆ. ಈ ‘ರಾಕೆಟ ಲಾಂಚರ’ನ್ನು ರಷ್ಯಾದಲ್ಲಿ ತಯಾರಿಸಲಾಗುತ್ತಿದೆ. ರಕ್ಷಣಾ ತಜ್ಞರ ಪ್ರಕಾರ ರಷ್ಯಾ ಇಂತಹ ಶಸ್ತ್ರಾಸ್ತ್ರಗಳನ್ನು ಅಫಘಾನಿಸ್ತಾನ ಸೇನೆಗೆ ಮಾರಾಟ ಮಾಡಿತ್ತು. ಮೊಹಾಲಿಯಲ್ಲಿ ದಾಳಿ ಮಾಡಿದ ‘ರಾಕೆಟ ಗ್ರೆನೇಡ್’ಅನ್ನು ಅಮೇರಿಕಾವು ಅಫಘಾನಿಸ್ತಾನಕ್ಕೆ ಮತ್ತು ನಂತರ ತಾಲಿಬಾನ ಪಾಕಿಸ್ತಾನಕ್ಕೆ ಮಾರಾಟ ಮಾಡಿತ್ತು.
ಸಂಪಾದಕೀಯ ನಿಲುವುಪಂಜಾಬನಲ್ಲಿ ಹೆಚ್ಚುತ್ತಿರುವ ಖಲಿಸ್ತಾನಿ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಲು, ಕೇಂದ್ರ ಸರಕಾರವು ಇನ್ನು ಮುಂದೆ ಅಂತಹ ಭಯೋತ್ಪಾಕರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ! |
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ