ವಟಸಾವಿತ್ರಿ ವ್ರತ

೧. ತಿಥಿ : ಜ್ಯೇಷ್ಠ ಹುಣ್ಣಿಮೆ (ಜೂನ್ ೧೪)

೨. ಉದ್ದೇಶ : ಸಾವಿತ್ರಿಯಂತೆಯೇ ತಮ್ಮ ಪತಿಯ ಆಯುಷ್ಯವೂ ವೃದ್ಧಿಯಾಗಬೇಕೆಂದು ಸ್ತ್ರೀಯರು ಈ ವ್ರತವನ್ನು ಪ್ರಾರಂಭಿಸಿದರು.

೩. ಸಾವಿತ್ರಿಯ ಮಹತ್ವ : ಭರತಖಂಡದಲ್ಲಿ ಪ್ರಸಿದ್ಧಿ ಹೊಂದಿರುವ ಪತಿವ್ರತೆಯರಲ್ಲಿ ಸಾವಿತ್ರಿಯು ಆದರ್ಶಳಾಗಿದ್ದಾಳೆ; ಹಾಗೆಯೇ ಅವಳನ್ನು ಅಖಂಡ ಸೌಭಾಗ್ಯದ ಪ್ರತೀಕ ವೆಂದೂ ಪರಿಗಣಿಸಲಾಗುತ್ತದೆ.

೪. ವ್ರತದ ದೇವತೆ : ಈ ವ್ರತದ ಪ್ರಧಾನ ದೇವತೆ ಸಾವಿತ್ರಿಸಹಿತ ಬ್ರಹ್ಮದೇವ. ಸತ್ಯವಾನ, ಸಾವಿತ್ರಿ, ನಾರದ ಮತ್ತು ಯಮಧರ್ಮ ಇವರು ಉಪ (ಗೌಣ) ದೇವತೆಗಳಾಗಿದ್ದಾರೆ.

ವ್ರತವನ್ನು ಆಚರಿಸುವ ಪದ್ಧತಿ

ಅ. ಸಂಕಲ್ಪ : ಪ್ರಾರಂಭದಲ್ಲಿ ಸೌಭಾಗ್ಯವತಿ ಸ್ತ್ರೀಯು ‘ನನಗೆ ಮತ್ತು ನನ್ನ ಪತಿಗೆ ಆರೋಗ್ಯಸಂಪನ್ನ ದೀರ್ಘಾಯುಷ್ಯ ದೊರೆಯಲಿ, ಎಂದು ಸಂಕಲ್ಪ ಮಾಡಬೇಕು.

ಆ. ಪೂಜೆ : ವಟಕ್ಕೆ ಷೋಡಶೋಪಚಾರ ಪೂಜೆಯನ್ನು ಮಾಡಬೇಕು. ಪೂಜೆಯಲ್ಲಿ ಅಭಿಷೇಕವಾದ ನಂತರ ವಟಕ್ಕೆ ದಾರವನ್ನು ಸುತ್ತಬೇಕು, ಅಂದರೆ ವಟದ ಕೊಂಬೆಯ ಸುತ್ತಲೂ ಗಡಿಯಾರದ ಮುಳ್ಳುಗಳು ತಿರುಗುವ ದಿಕ್ಕಿನಲ್ಲಿ ಹತ್ತಿಯ ದಾರದಿಂದ ಮೂರು ಸುತ್ತು ಸುತ್ತಬೇಕು. ಪೂಜೆಯ ಕೊನೆಯಲ್ಲಿ ‘ಅಖಂಡ ಸೌಭಾಗ್ಯ ಲಭಿಸಲಿ, ಪ್ರತಿಯೊಂದು ಜನ್ಮದಲ್ಲಿ ಈ ಪತಿಯೇ ಲಭಿಸಲಿ, ಹಾಗೆಯೇ ಧನಧಾನ್ಯ ಮತ್ತು ಕುಲದ ವೃದ್ಧಿಯಾಗಲಿ, ಎಂದು ಸಾವಿತ್ರೀಸಹ ಬ್ರಹ್ಮದೇವನಿಗೆ ಪ್ರಾರ್ಥಿಸುತ್ತಾರೆ.

ಇ. ಉಪವಾಸ : ಸ್ತ್ರೀಯರು ಸಂಪೂರ್ಣ ದಿನ ಉಪವಾಸ ವನ್ನು ಮಾಡಬೇಕು.