ಕಾಶ್ಮೀರಿ ಹಿಂದೂಗಳಿಗೆ ಮಹಾರಾಷ್ಟ್ರದ ಬಾಗಿಲು ಯವಾಗಲೂ ತೆರೆದಿರುತ್ತದೆ ! – ಆದಿತ್ಯ ಠಾಕರೆ

ಶ್ರೀನಗರ – ಕಾಶ್ಮೀರಿ ಹಿಂದೂಗಳಿಗೆ ಮಹಾರಾಷ್ಟ್ರದ ಬಾಗಿಲು ಯವಾಗಲೂ ತೆರೆದಿರುತ್ತದೆ, ಎಂದು ಶಿವಸೇನೆಯ ನಾಯಕ ಹಾಗೂ ಮಹಾರಾಷ್ಟ್ರ ಪ್ರವಾಸೋದ್ಯಮ ಸಚಿವ ಆದಿತ್ಯ ಠಾಕರೆ ಹೇಳಿದ್ದಾರೆ.

ಕಾಶ್ಮೀರ ಕಣಿವೆಯಲ್ಲಿ ಕಾಶ್ಮೀರಿ ಹಿಂದೂಗಳು ಮತ್ತು ಹಿಂದೂಗಳ ‘ಉದ್ದೇಶಿತ ಹತ್ಯೆ’ ಹಿನ್ನೆಲೆಯಲ್ಲಿ ಶಿವಸೇನಾ ನಾಯಕಿ ಮತ್ತು ಸಂಸದೆ ಪ್ರಿಯಾಂಕಾ ಚತುರ್ವೇದಿ ಕಾಶ್ಮೀರ ಕಣಿವೆಗೆ ಹೋಗಿ ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಿದರು. ಈ ಭೇಟಿಯ ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡುತ್ತ ಆದಿತ್ಯ ಠಾಕರೆ ಮೇಲಿನ ಹೇಳಿಕೆಯನ್ನು ನೀಡಿದ್ದಾರೆ.