
ಹೊಸ ದೆಹಲಿ – ದ್ವೇಷದಿಂದ ತುಂಬಿದ ಭಾಷಣಗಳು ಯಾವಾಗಲೂ ಒಂದು ಸಮುದಾಯವನ್ನು ಗುರಿಯಾಗಿರಿಸಿಕೊಳ್ಳುತ್ತವೆ. ಇದರಿಂದ ಈ ಸಮಾಜದ ಮನಸ್ಥಿತಿಯ ಮೇಲೆ ಪರಿಣಾಮ ಬೀರುತ್ತದೆ. ಇದು ಅವರಲ್ಲಿ ಭಯ ಹುಟ್ಟಿಸುತ್ತದೆ. ಇಂತಹ ಭಾಷಣಗಳು ಸಂಬಂಧಪಟ್ಟ ಸಮಾಜದ ಮೇಲಿನ ದಾಳಿಯ ಮೊದಲ ಹಂತವಾಗಿದೆ. ಅದರ ನಂತರ ಬಹಿಷ್ಕಾರ ಹಾಕುವುದು, ಅವರನ್ನು ಓಡಿಹೋಗುವಂತೆ ಒತ್ತಾಯಿಸುವುದು ಮತ್ತು ನಂತರ ನರಮೇಧ. ಜನಸಂಖ್ಯೆಯ ಆಧಾರದ ಮೇಲೆ ಸಮಾಜವನ್ನು ಗುರಿಪಡಿಸಲಾಗುತ್ತದೆ. ಇಂತಹ ಘಟನೆಗಳು ದೇಶದ ಹಲವು ಕಡೆ ನಡೆದಿವೆ ಮತ್ತು ನಡೆಯುತ್ತಿವೆ. ಇದು ಭೌಗೋಲಿಕ ಜನಸಂಖ್ಯೆಯನ್ನೂ ಬದಲಾಯಿಸಿದೆ. ಇದಕ್ಕೆ ಮುಖ್ಯ ಉದಾಹರಣೆಯೆಂದರೆ ಕಾಶ್ಮೀರ ಕಣಿವೆಯಿಂದ ಕಾಶ್ಮೀರಿ ಹಿಂದೂಗಳ ಪಲಾಯನ ಎಂದು ದೆಹಲಿ ಉಚ್ಚನ್ಯಾಯಾಲಯ ಅರ್ಜಿಯೊಂದರ ವಿಚಾರಣೆ ವೇಳೆ ಹೇಳಿದೆ. ೨೦೨೦ ರ ಪೌರತ್ವ ತಿದ್ದುಪಡಿ ಮಸೂದೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ಮತ್ತು ಭಾಜಪದ ಸಂಸದ ಪ್ರವೇಶ್ ಸಾಹಿಬ್ ಸಿಂಗ್ ವರ್ಮಾ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸಿಪಿಐ (ಎಂ) ನಾಯಕಿ ವೃಂದಾ ಕರಾತ ಇವರು ಸಲ್ಲಿಸಿದ ಅರ್ಜಿಯ ಮೇಲೆ ನ್ಯಾಯಾಲಯವು ಮೇಲಿನ ಹೇಳಿಕೆಯನ್ನು ನೀಡಿದೆ. ಈ ಅರ್ಜಿಯನ್ನು ಉಚ್ಚನ್ಯಾಯಾಲಯ ನಿರಾಕರಿಸಿದೆ.
According to an RTI reply, total number of Kashmiri Pandit families registered as migrants is 44,167. #JammuandKashmirhttps://t.co/xZVryGuixC
— IndiaToday (@IndiaToday) June 13, 2022
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನಾವಿಕರನ್ನು ಒತ್ತೆಯಾಳಾಗಿರಿಸಿದ್ದ 44 ಸೊಮಾಲಿಯನ್ನರಿಗೆ ಜೀವಾವಧಿ
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC