
ಪ್ರಸ್ತುತ, ಹಿಂದೂಗಳು ದೌರ್ಜನ್ಯವನ್ನು ಎದುರಿಸುತ್ತಿದ್ದಾರೆ. ಶಿವಾಜಿ ಮಹಾರಾಜರು ಮಾವಳೆಯರನ್ನು ಸಂಘಟಿಸಿ ಹಿಂದವೀ ಸ್ವರಾಜ್ಯವನ್ನು ಸ್ಥಾಪಿಸಿದರು. ಅದರಂತೆ ರಣತಂತ್ರವನ್ನು ನಿರ್ಧರಿಸಿ ಹಿಂದೂಗಳು ಹಿಂದೂ ರಾಷ್ಟ್ರ ಸ್ಥಾಪನೆಗಾಗಿ ಕಾರ್ಯ ಮಾಡಬೇಕಿದೆ. ಇದಕ್ಕಾಗಿ ಪ್ರತಿ ಗ್ರಾಮಗಳಲ್ಲಿ ಗ್ರಾಮ ರಕ್ಷಾ ದಳವನ್ನು ಸ್ಥಾಪಿಸುವ ಮೂಲಕ ಯುವಕ-ಯುವತಿಯರಲ್ಲಿ ರಾಷ್ಟ್ರ ಮತ್ತು ಧರ್ಮದ ರಕ್ಷಣೆಯ ಭಾವನೆ ಮೂಡಿಸಬೇಕಿದೆ. ಗ್ರಾಮದ ಎಲ್ಲ ಯುವಕ-ಯುವತಿಯರಿಗೆ ಸ್ವರಕ್ಷಣಾ ತರಬೇತಿ ನೀಡಬೇಕು. ಗ್ರಾಮದಲ್ಲಿ ಯಾವುದೇ ಬಿಕ್ಕಟ್ಟು ಉಂಟಾದರೆ ಗ್ರಾಮ ರಕ್ಷಾ ದಳದವರು ತಾವಾಗಿಯೇ ಗ್ರಾಮ ರಕ್ಷಣೆ ಮಾಡುವರು. ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಸ್ವರಕ್ಷಣಾ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತದೆ. ದೇವಸ್ಥಾನಗಳು ಹಿಂದೂಗಳ ಶಕ್ತಿಸ್ಥಾನವಾಗಿವೆ. ‘ಮತಾಂಧರು ಮೊದಲು ದೇವಸ್ಥಾನಗಳ ಮೇಲೆ ದಾಳಿ ಮಾಡುತ್ತಾರೆ’ ಎಂಬುದನ್ನು ಗಮನದಲ್ಲಿಟ್ಟುಕೊಂಡು ದೇವಸ್ಥಾನಗಳ ರಕ್ಷಣೆಗೆ ಗ್ರಾಮ ರಕ್ಷಾ ದಳದವರು ಯೋಜನೆ ರೂಪಿಸಬೇಕು. ‘ನಾನೊಬ್ಬ ಹಿಂದೂ, ರಾಷ್ಟ್ರ ಮತ್ತು ಧರ್ಮವನ್ನು ರಕ್ಷಿಸುವುದು ನನ್ನ ಕರ್ತವ್ಯ’ ಎಂಬ ಭಾವನೆಯನ್ನು ಯುವಕ-ಯುವತಿಯರಲ್ಲಿ ಮೂಡಿಸುವುದು ಅಗತ್ಯವಾಗಿದೆ, ಎಂದು ಹಿಂದೂ ಜನಜಾಗೃತಿ ಸಮಿತಿಯ ಜಳಗಾವ ಜಿಲ್ಲೆಯ ಸಮನ್ವಯಕ ಶ್ರೀ. ಪ್ರಶಾಂತ ಜುವೇಕರ ಇವರು ಕರೆ ನೀಡಿದರು. ‘ಗ್ರಾಮ ರಕ್ಷಾ ದಳದ ಸ್ಥಾಪನೆಯ ಅವಶ್ಯಕತೆ’ ಈ ಕುರಿತು ಶ್ರೀ. ಜುವೇಕರ ಇವರು ಮಾರ್ಗದರ್ಶನ ಮಾಡಿದರು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !