ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯಲ್ಲಿ ಹಿಂಸಾತ್ಮಕ ಪ್ರತಿಭಟನೆ: ದ್ವಿಚಕ್ರ ವಾಹನಗಳು, ಬಸ್ಗಳು ಮತ್ತು ಜೀಪ್ಗಳಿಗೆ ಬೆಂಕಿ

ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆ ವಿರುದ್ಧ ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯಲ್ಲಿ ಸತತ ಎರಡನೇ ದಿನವೂ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿವೆ. ಜೂನ್ ೧೮ರಂದು ಬೆಳಗ್ಗೆ ನೂರಾರು ಯುವಕರು ಬೀದಿಗಿಳಿದಿದ್ದರು. ಬದಲಾಪುರ ಮತ್ತು ಲಾಲಾ ಬಜಾರ್ನಲ್ಲಿ ಪ್ರತಿಭಟನಾಕಾರರು ಹಲವಾರು ದ್ವಿಚಕ್ರ ವಾಹನಗಳು, ಎರಡು ಬಸ್ಗಳು ಮತ್ತು ಜೀಪ್ಗೆ ಬೆಂಕಿ ಹಚ್ಚಿದರು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಗುಂಡು ಹಾರಿಸಿ ನಂತರ ಗಾಳಿಯಲ್ಲಿ ಗುಂಡು ಹಾರಿಸಿದರು.
ಬದಲಾಪುರ ಬಳಿ ರಾಜ್ಯ ಮಾಹಿತಿ ಆಯುಕ್ತ ಪ್ರಮೋದ್ ತಿವಾರಿಯವರು ತೆರಳುತ್ತಿದ್ದ ಪೊಲೀಸ್ ವಾಹನದ ಮೇಲೆ ಕಲ್ಲು ತೂರಾಟ ನಡೆಯಿತು. ಈ ಘಟನೆಯಲ್ಲಿ ಪೊಲೀಸ್ ಉಪ ನಿರೀಕ್ಷಕ ರಾಜೇಂದ್ರ ಯಾದವ್ ಮತ್ತು ಪೊಲೀಸ್ ಸಿಬ್ಬಂಧಿ ರಾಮ್ ಯಾದವ್ ಗಾಯಗೊಂಡಿದ್ದಾರೆ. ಜೌನಪುರ-ಪ್ರಯಾಗ್ರಾಜ್ ಹೆದ್ದಾರಿಯಲ್ಲಿ ಬಹಳ ಹೊತ್ತು ಸಂಚಾರ ದಟ್ಟಣೆ ಉಂಟಾಗಿತ್ತು. ಬದಲಾಪುರದ ಹಲವೆಡೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದರು.
‘अग्निपथ’ विरोध: यूपी में दूसरे दिन भी हिंसा जारी, बस और जीप में लगाई आग, पुलिसकर्मियों पर बरसाए पत्थर #Agnipath #AgnipathRecruitmentScheme #AgniveerScheme #Agniveerprotest #UttarPradesh https://t.co/CcdPqC7gDo
— Asianetnews Hindi (@AsianetNewsHN) June 18, 2022
ನಾರಾಯಣಪುರ: ಕ್ರೈಸ್ತ ಧರ್ಮ ಸ್ವೀಕರಿಸಿದ ಆದಿವಾಸಿಗಳ ಗ್ರಾಮದಿಂದ ಬಹಿಷ್ಕಾರ
ಶ್ರೀರಾಮ ಮಂದಿರದ ದೇಣಿಗೆ (ಕಾಣಿಕೆ) ಹಣ ಕಳ್ಳತನದ ನಂತರ ಮಂದಿರದ ಸರಕಾರೀಕರಣ ಆಗುವ ಸಾಧ್ಯತೆ
ಶ್ರೀರಾಮಲಲ್ಲಾನ ಮೂರ್ತಿಯನ್ನು ಕೆತ್ತಿದ ಶಿಲ್ಪಿ ಅರುಣ ಯೋಗಿರಾಜ ಅವರ ಪ್ರತಿಕ್ರಿಯೆ!
“ದೋಷಿಗಳಿಗೆ ಕಠಿಣ ಶಿಕ್ಷೆಯಾಗಲೇಬೇಕು!” – ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಮಠ
‘ಜಗತ್ತಿನಾದ್ಯಂತ ತಂತ್ರಜ್ಞಾನ ಕ್ಷೇತ್ರವು ವೇಗವಾಗಿ ಮುನ್ನಡೆಯುತ್ತಿರುವಾಗ, ಸರಕಾರವು ‘ಐಐಟಿ’ (IIT) ಸಂಸ್ಥೆಗಳನ್ನು ಜ್ಯೋತಿಷ್ಯ, ಪುನರ್ಜನ್ಮ ಮುಂತಾದ ವಿಷಯಗಳ ಸಂಶೋಧನೆಯಲ್ಲಿ ತೊಡಗಿಸುತ್ತಿದೆ!’ (ಅಂತೆ)
ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ತಂದೆಯ ಹತ್ಯೆ ಮಾಡಿಸಿದ ಮಗನ ಬಂಧನ