ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯಲ್ಲಿ ಹಿಂಸಾತ್ಮಕ ಪ್ರತಿಭಟನೆ: ದ್ವಿಚಕ್ರ ವಾಹನಗಳು, ಬಸ್ಗಳು ಮತ್ತು ಜೀಪ್ಗಳಿಗೆ ಬೆಂಕಿ

ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆ ವಿರುದ್ಧ ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯಲ್ಲಿ ಸತತ ಎರಡನೇ ದಿನವೂ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿವೆ. ಜೂನ್ ೧೮ರಂದು ಬೆಳಗ್ಗೆ ನೂರಾರು ಯುವಕರು ಬೀದಿಗಿಳಿದಿದ್ದರು. ಬದಲಾಪುರ ಮತ್ತು ಲಾಲಾ ಬಜಾರ್ನಲ್ಲಿ ಪ್ರತಿಭಟನಾಕಾರರು ಹಲವಾರು ದ್ವಿಚಕ್ರ ವಾಹನಗಳು, ಎರಡು ಬಸ್ಗಳು ಮತ್ತು ಜೀಪ್ಗೆ ಬೆಂಕಿ ಹಚ್ಚಿದರು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಗುಂಡು ಹಾರಿಸಿ ನಂತರ ಗಾಳಿಯಲ್ಲಿ ಗುಂಡು ಹಾರಿಸಿದರು.
ಬದಲಾಪುರ ಬಳಿ ರಾಜ್ಯ ಮಾಹಿತಿ ಆಯುಕ್ತ ಪ್ರಮೋದ್ ತಿವಾರಿಯವರು ತೆರಳುತ್ತಿದ್ದ ಪೊಲೀಸ್ ವಾಹನದ ಮೇಲೆ ಕಲ್ಲು ತೂರಾಟ ನಡೆಯಿತು. ಈ ಘಟನೆಯಲ್ಲಿ ಪೊಲೀಸ್ ಉಪ ನಿರೀಕ್ಷಕ ರಾಜೇಂದ್ರ ಯಾದವ್ ಮತ್ತು ಪೊಲೀಸ್ ಸಿಬ್ಬಂಧಿ ರಾಮ್ ಯಾದವ್ ಗಾಯಗೊಂಡಿದ್ದಾರೆ. ಜೌನಪುರ-ಪ್ರಯಾಗ್ರಾಜ್ ಹೆದ್ದಾರಿಯಲ್ಲಿ ಬಹಳ ಹೊತ್ತು ಸಂಚಾರ ದಟ್ಟಣೆ ಉಂಟಾಗಿತ್ತು. ಬದಲಾಪುರದ ಹಲವೆಡೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದರು.
‘अग्निपथ’ विरोध: यूपी में दूसरे दिन भी हिंसा जारी, बस और जीप में लगाई आग, पुलिसकर्मियों पर बरसाए पत्थर #Agnipath #AgnipathRecruitmentScheme #AgniveerScheme #Agniveerprotest #UttarPradesh https://t.co/CcdPqC7gDo
— Asianetnews Hindi (@AsianetNewsHN) June 18, 2022
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ