
ಬೆಂಗಳೂರು (ಕರ್ನಾಟಕ) – ಕರ್ನಾಟಕ ಉಚ್ಚ ನ್ಯಾಯಾಲಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುರಿತು ಮಹತ್ವದ ತೀರ್ಪು ನೀಡಿದೆ. ‘ಸಾರ್ವಜನಿಕ ಸ್ಥಳಗಳಲ್ಲಿ ನಿಂದನೆ ನಡೆದರೆ ಮಾತ್ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ (ಅಟ್ರೋಸಿಟಿ) ತಡೆ ಕಾಯ್ದೆಯಡಿ ಅಪರಾಧ ದಾಖಲಿಸಬಹುದು’ ಎಂದು ನ್ಯಾಯಾಲಯ ಹೇಳಿದೆ.
For SC/ST Atrocities Act to apply, hurling of abuse has to be in public place: K’taka HC #news #dailyhunt https://t.co/9Srt5XG3MP
— Dailyhunt (@DailyhuntApp) June 23, 2022
೧. ೨೦೨೦ರಲ್ಲಿ ರಿತೇಶ ಪಯಾಸ್ ಎಂಬ ಆರೋಪಿಯು ದೂರುದಾರ ಮೋಹನನನ್ನು ಕಟ್ಟಡದ ನೆಲಮಾಳಿಗೆಯಲ್ಲಿ ಅವಮಾನಿಸಿದ್ದು, ಆಗ ಅಲ್ಲಿ ಕಾರ್ಮಿಕರಿದ್ದರು ಎಂದು ಮೋಹನ ಹೇಳಿಕೊಂಡಿದ್ದರು.
೨. ಎರಡು ಕಡೆಯ ವಾದವನ್ನು ಆಲಿಸಿದ ಬಳಿಕ ಎರಡು ವಿಷಯಗಳು ಸ್ಪಷ್ಟವಾಯಿತು ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ತಿಳಿಸಿದೆ. ಒಂದು ಕಟ್ಟಡದ ನೆಲಮಾಳಿಗೆಯು ಸಾರ್ವಜನಿಕ ಸ್ಥಳವಲ್ಲ ಮತ್ತು ಇನ್ನೊಂದು ದೂರುದಾರರು ಅವರ ಸ್ನೇಹಿತರು ಮತ್ತು ಇತರ ಸಿಬ್ಬಂದಿ ಅಲ್ಲಿದ್ದರು. ಸಾರ್ವಜನಿಕ ಸ್ಥಳಗಳಲ್ಲಿ ಜನಾಂಗಿಯ ನಿಂದನೆ ಪದಗಳನ್ನು ಬಳಸದಿದ್ದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ (ಅಟ್ರೋಸಿಟಿ) ದೌರ್ಜನ್ಯ ತಡೆ ಕಾಯ್ದೆಯಡಿ ಅಪರಾಧ ದಾಖಲಿಸಲಾಗುವದಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಜನಾಂಗಿಯ ನಿಂದನೆ ಪದಗಳನ್ನು ಬಳಿಸಿದರೆ ಮಾತ್ರ ಈ ಕಾಯ್ದೆಯಡಿ ಕ್ರಮ ಕೈಗೊಳ್ಳಲು ಸಾಧ್ಯ.
ಕಾಶ್ಮೀರದಲ್ಲಿ ಸರಳಾ ಭಟ್ ಹತ್ಯೆ ಪ್ರಕರಣ: 36 ವರ್ಷಗಳ ನಂತರ ಉಗ್ರರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ!
ನಿಜಾಮಾಬಾದ್ (ತೆಲಂಗಾಣ): ಶಾಲೆಯಲ್ಲಿ ಹಿಂದೂ ವಿದ್ಯಾರ್ಥಿಗಳಿಗೆ ಉರ್ದು ಮತ್ತು ಕಲ್ಮಾ ಕಲಿಸುವುದಕ್ಕೆ ವಿರೋಧ
ವಿವಾಹಕ್ಕಾಗಿ ಮುಸ್ಲಿಂ ಯುವತಿಯಿಂದ ಇಸ್ಲಾಂ ಧರ್ಮ ಸ್ವೀಕರಿಸಲು ಒತ್ತಡ; ಹಿಂದು ಯುವಕನ ಆತ್ಮಹತ್ಯೆ!
ಮಣ್ಣಿನಿಂದ ತಯಾರಿಸಿದ ಶ್ರೀಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ! – ಪ್ರಧಾನಿ
Kota Conversion Racket : ಕೋಟಾ (ರಾಜಸ್ಥಾನ): ಹಿಂದೂ ಮಹಿಳೆಯರ ಮತಾಂತರ, ಲೈಂಗಿಕ ಶೋಷಣೆ
ಪ್ರಾರ್ಥನೆ ಅಥವಾ ಮಂತ್ರಗಳನ್ನು ಹೇಳಲು ವಿದ್ಯಾರ್ಥಿಗಳು ಅಥವಾ ಪೋಷಕರ ಒಪ್ಪಿಗೆ ಅತ್ಯಗತ್ಯ! – IRS Nisha Oraon