
ಮಂಗಳೂರು – ಗೃಹ ಸಚಿವ ಅರಗ ಜ್ಞಾನೇಂದ್ರ ಇವರು ದಕ್ಷಿಣ ಕನ್ನಡ ಜಿಲ್ಲೆಯ ಪೊಲಿಸರಿಗೆ ಜಿಲ್ಲೆಯಲ್ಲಿ ಅನಧಿಕೃತವಾಗಿ ವಾಸಿಸುತ್ತಿರುವ ವಿದೇಶಿ ನಾಗರಿಕರ ಸಮೀಕ್ಷೆ ನಡೆಸುವಂತೆ ಆದೇಶ ನೀಡಿದ್ದಾರೆ. ‘ವೀಸಾದ ಅವಧಿ ಮುಗಿದರೂ ಅನಧಿಕೃತವಾಗಿ ಮತ್ತು ಅಧಿಕೃತ ದಾಖಲೆಗಳು ಇಲ್ಲದಿರುವಾಗಲೂ ಕರ್ನಾಟಕದಲ್ಲಿ ವಾಸಿಸುವ ವಿದೇಶಿ ನಾಗರಿಕರನ್ನು ಹುಡುಕುವುದು ಸಮೀಕ್ಷೆಯ ಉದ್ದೇಶವಾಗಿದೆಯೆಂದು ಜ್ಞಾನೇಂದ್ರ ಇವರು ಹೇಳಿದರು.
ಅಕ್ರಮವಾಗಿ ನೆಲೆಸಿರುವ ವಿದೇಶಿ ನಾಗರಿಕರ ಮೇಲೆ ಹೆಚ್ಚಿನ ನಿಗಾ: ಆರಗ ಜ್ಞಾನೇಂದ್ರ https://t.co/rselvhQpjx#Karnataka #AragaJnanendra #BJP #KannadaNews #Police #Bengaluru
— PublicTV (@publictvnews) September 6, 2021
ಗೃಹ ಸಚಿವ ತಮ್ಮ ಮಾತನ್ನು ಮುಂದುವರೆಸುತ್ತಾ, ಪೊಲಿಸರಿಗೆ ‘ವಿದೇಶಿ ನಾಗರಿಕರ ಬಳಿ ನಕಲಿ ಆಧಾರಕಾರ್ಡ, ರೇಶನಕಾರ್ಡ ಅಥವಾ ಮತದಾನ ಗುರುತಿನ ಚೀಟಿ ಇದೆಯೇ ?, ಎಂದು ಹುಡುಕಬೇಕಾಗುವುದು. ಈ ಪ್ರಕರಣದಲ್ಲಿ ಪೊಲಿಸರಿಗೆ ಎರಡು ವಾರದಲ್ಲಿ ವರದಿ ಸಲ್ಲಿಸುವಂತೆ ಆದೇಶ ನೀಡಲಾಗಿದೆ. ಗೃಹ ಸಚಿವ ಜ್ಞಾನೇಂದ್ರ ಇವರು ಜಿಲ್ಲಾ ಪೊಲಿಸರ ಹಿರಿಯ ಅಧಿಕಾರಿಗಳೊಂದಿಗೆ ಜರುಗಿದ ಸಭೆಯ ಬಳಿಕ ಈ ಮಾಹಿತಿಯನ್ನು ನೀಡಿದರು. ಬೆಂಗಳೂರಿನಲ್ಲಿ ಇತ್ತೀಚೆಗಷ್ಟೇ ಈ ರೀತಿಯ ಸಮೀಕ್ಷೆ ಕೈಕೊಳ್ಳಲಾಗಿದೆಯೆಂದು ಅವರು ಹೇಳಿದರು.
ಸಂಪಾದಕೀಯ ನಿಲುವುಈ ರೀತಿ ಆದೇಶ ಏಕೆ ನೀಡಬೇಕಾಗುತ್ತದೆ ? ಪೊಲಿಸರಿಗೆ ಏಕೆ ಗಮನಕ್ಕೆ ಬರುವುದಿಲ್ಲ ? |
man ki baat : ಇಂಧನ ಉಳಿತಾಯ ಮಾಡಿ ಮತ್ತು ಚಿನ್ನ ಖರೀದಿ ಸೀಮಿತವಾಗಿಡಿ !
ಫೋರ್ಟ್ (ಮುಂಬಯಿ) ನಲ್ಲಿನ ಸರಕಾರಿ ಜಾಗದ ಪ್ರಕರಣದಲ್ಲಿ ಚರ್ಚ್ಗೆ ಜಿಲ್ಲಾಧಿಕಾರಿಗಳಿಂದ ಬಾಕಿ ಹಣ ವಸೂಲಾತಿಯ ನೋಟಿಸ್ !
ರಾ.ಸ್ವ. ಸಂಘದಲ್ಲಿ ಜನಸಂದಣಿ ಹೆಚ್ಚಾದ ಕಾರಣ ಒಳ್ಳೆಯ ಜನರ ಕೊರತೆಯಾಗಿದೆ !
ಗಾಜಿಯಾಬಾದ (ಉತ್ತರ ಪ್ರದೇಶ) ನಲ್ಲಿ ಒತ್ತುವರಿ ಮಾಡಿ ನಿರ್ಮಿಸಿದ್ದ 3 ಅಂತಸ್ತಿನ ಮಜಾರ್ ನೆಲಸಮ!
15 ಸಾವಿರ ಜನರನ್ನು ಕೊಲ್ಲುವ ಸಂಚು ಇತ್ತು! – ಆರೋಪಿ ಫಯ್ಯಾಜ್ ಒಪ್ಪಿಗೆ
ಆಸ್ಸಾಂ: ಮಾಜಿ ಪೊಲೀಸ್ ಉಪಮಹಾನಿರ್ದೇಶಕರ 53 ಕೋಟಿ ರೂಪಾಯಿಗಳ ಆಸ್ತಿ ಜಪ್ತಿ !