
ಕೋಲಕತಾ : ಬಂಗಾಳದ ೨೪ ಪರಗಣ ಜಿಲ್ಲೆಯಲ್ಲಿ ತೃಣಮೂಲ ಕಾಂಗ್ರೆಸ್ ಮುಖಂಡ ಹಾಗೂ ಆತನ ಇಬ್ಬರು ಸಹಚರರನ್ನು ಅಪರಿಚಿತ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ತೃಣಮೂಲ ಕಾಂಗ್ರೆಸ್ ಮುಖಂಡ ಮತ್ತು ಪಂಚಾಯತ್ ಸಮಿತಿ ಸದಸ್ಯ ಸ್ವಪನ್ ಮಾಝಿ ಅವರು ತಮ್ಮ ಇಬ್ಬರು ಸಹಚರರೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಅಷ್ಟರಲ್ಲಿ ಅಲ್ಲಿಗೆ ಕೆಲವರು ಬಂದರು. ಅವರು ಸ್ವಪನ್ ಅವರ ವಾಹನ ನಿಲ್ಲಿಸಿ ಮೂವರ ಮೇಲೆ ಏಕಾಏಕಿ ಗುಂಡು ಹಾರಿಸಿದ್ದಾರೆ. ನಂತರ ದಾಳಿಕೋರರು ಸ್ಥಳದಿಂದ ಪರಾರಿಯಾದರು. ಈ ಘಟನೆಯಿಂದ ಸ್ಥಳದಲ್ಲಿ ಉದ್ವಿಗ್ನತೆ ಮೂಡಿದ್ದು, ಭಯದ ವಾತಾವರಣ ನಿರ್ಮಾಣವಾಗಿದೆ. ಬೆಳಗ್ಗೆ ೯ ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
ಸಂಪಾದಕೀಯ ನಿಲುವುತೃಣಮೂಲ ಕಾಂಗ್ರೆಸ್ನ ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ವ್ಯವಸ್ಥೆಯಿಂದಾಗಿ ಆ ಪಕ್ಷದ ನಾಯಕರೂ ಅಸುರಕ್ಷಿತರಾಗಿದ್ದಾರೆ ! ‘ಎಲ್ಲಿ ಆಡಳಿತ ಪಕ್ಷದ ನಾಯಕರೇ ಅಸುರಕ್ಷಿತವಾಗಿದ್ದರೆ ಅಲ್ಲಿ ಜನಸಾಮಾನ್ಯರು ಹೇಗೆ ಬದುಕುತ್ತಿರಬಹುದು ?’, ಇದರ ಬಗ್ಗೆ ವಿಚಾರ ಮಾಡದೇ ಇರುವುದೇ ಉತ್ತಮ ! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ