ರಕ್ಷಣಾಕಾರ್ಯವು ಆರಂಭವಾಗಿದೆ

ಶ್ರೀನಗರ (ಜಮ್ಮೂ-ಕಾಶ್ಮೀರ) – ಅಮರನಾಥ ಗೂಹೆಯ ಬಳಿ ಇರುವ ಯಾತ್ರಿಗಳ ತಂಗುದಾಣದ ಬಳಿ ಜುಲೈ ೮ರಂದು ಅಪಾರ ಮಳೆ ಬಂದಿತು. ಇದರಿಂದಾಗಿ ನೆರೆ ಬಂದು ಇಲ್ಲಿಯವರೆಗೆ ೧೬ ಜನರು ಮೃತಪಟ್ಟಿದ್ದರೆ, ೪೦ ಜನರು ಕಾಣೆಯಾಗಿದ್ದಾರೆ. ಈ ಮಳೆಯಲ್ಲಿ ಈ ತಂಗುದಾಣದಲ್ಲಿರುವ ಕೆಲವು ಡೆರೆಗಳು, ಪ್ರಸಾದಾಲಯಗಳಿಗೆ ಹಾನಿಯಾಗಿದೆ. ಇಲ್ಲಿ ರಕ್ಷಣಾಕಾರ್ಯವು ನಡೆಯುತ್ತಲೇ ಇದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ, ಪೊಲೀಸರು ಹಾಗೂ ನಗರದ ಸರಕಾರಿ ಅಧಿಕಾರಿಗಳು ಮತ್ತು ಕೆಲಸಗಾರರು ಇದರಲ್ಲಿ ಸೇರಿದ್ದಾರೆ. ಇದರೊಂದಿಗೆ ಇಂಡೋ-ಟಿಬೇಟಿಯನ್ ಗಡಿಯ ಪೊಲೀಸರೂ ಇದರಲ್ಲಿ ಸಹಭಾಗಿಯಾಗಿದ್ದಾರೆ. ಗಡಿ ಭದ್ರತಾ ಪಡೆಯ ಹೆಲಿಕಾಪ್ಟರಗಳನ್ನೂ ಬಳಸಲಾಗುತ್ತಿದೆ. ಸದ್ಯ ಬಾಲತಾಲ ಹಾಗೂ ಪಹಲಗಾಮದಲ್ಲಿ ಯಾತ್ರಿಕರನ್ನು ತಡೆಯಲಾಗಿದೆ.
(ಸೌಜನ್ಯ : TV5 Kannada)
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ