ರಕ್ಷಣಾಕಾರ್ಯವು ಆರಂಭವಾಗಿದೆ

ಶ್ರೀನಗರ (ಜಮ್ಮೂ-ಕಾಶ್ಮೀರ) – ಅಮರನಾಥ ಗೂಹೆಯ ಬಳಿ ಇರುವ ಯಾತ್ರಿಗಳ ತಂಗುದಾಣದ ಬಳಿ ಜುಲೈ ೮ರಂದು ಅಪಾರ ಮಳೆ ಬಂದಿತು. ಇದರಿಂದಾಗಿ ನೆರೆ ಬಂದು ಇಲ್ಲಿಯವರೆಗೆ ೧೬ ಜನರು ಮೃತಪಟ್ಟಿದ್ದರೆ, ೪೦ ಜನರು ಕಾಣೆಯಾಗಿದ್ದಾರೆ. ಈ ಮಳೆಯಲ್ಲಿ ಈ ತಂಗುದಾಣದಲ್ಲಿರುವ ಕೆಲವು ಡೆರೆಗಳು, ಪ್ರಸಾದಾಲಯಗಳಿಗೆ ಹಾನಿಯಾಗಿದೆ. ಇಲ್ಲಿ ರಕ್ಷಣಾಕಾರ್ಯವು ನಡೆಯುತ್ತಲೇ ಇದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ, ಪೊಲೀಸರು ಹಾಗೂ ನಗರದ ಸರಕಾರಿ ಅಧಿಕಾರಿಗಳು ಮತ್ತು ಕೆಲಸಗಾರರು ಇದರಲ್ಲಿ ಸೇರಿದ್ದಾರೆ. ಇದರೊಂದಿಗೆ ಇಂಡೋ-ಟಿಬೇಟಿಯನ್ ಗಡಿಯ ಪೊಲೀಸರೂ ಇದರಲ್ಲಿ ಸಹಭಾಗಿಯಾಗಿದ್ದಾರೆ. ಗಡಿ ಭದ್ರತಾ ಪಡೆಯ ಹೆಲಿಕಾಪ್ಟರಗಳನ್ನೂ ಬಳಸಲಾಗುತ್ತಿದೆ. ಸದ್ಯ ಬಾಲತಾಲ ಹಾಗೂ ಪಹಲಗಾಮದಲ್ಲಿ ಯಾತ್ರಿಕರನ್ನು ತಡೆಯಲಾಗಿದೆ.
(ಸೌಜನ್ಯ : TV5 Kannada)
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!