
ಡೆಹ್ರಾಡೂನ್ : ಜುಲೈ ೧೦ ರಂದು ಈದ್-ಉಲ್-ಫಿತರ್ ಪ್ರಯುಕ್ತ ಮುಸ್ಲಿಂ ಬಾಹುಳ್ಯವಿರುವ ಮಂಗಲೌರಿನಲ್ಲಿ (ಹರಿದ್ವಾರ) ಕಸಾಯಿಖಾನೆಗಳ ಮೇಲಿನ ನಿಷೇಧವನ್ನು ಉತ್ತರಾಖಂಡ ಉಚ್ಚನ್ಯಾಯಾಲಯ ಹಿಂಪಡೆದಿದೆ. ಮಾರ್ಚ್ ೨೦೨೧ ರಲ್ಲಿ ಹರಿದ್ವಾರದಲ್ಲಿ ನಡೆದ ಕುಂಭಮೇಳದ ಸಂದರ್ಭದಲ್ಲಿ, ಉತ್ತರಾಖಂಡದ ಭಾಜಪ ಸರಕಾರವು ಹರಿದ್ವಾರ ಜಿಲ್ಲೆಯ ಎಲ್ಲಾ ಕಸಾಯಿಖಾನೆಗಳನ್ನು ನಿಷೇಧಿಸಿ ಅವುಗಳ ಪರವಾನಗಿಯನ್ನು ರದ್ದುಗೊಳಿಸಿತ್ತು. ಈ ಆದೇಶವು ೨ ಮಹಾನಗರ ಪಾಲಿಕೆಗಳು, ೨ ಪುರಸಭೆಗಳು ಮತ್ತು ೫ ನಗರ ಪಂಚಾಯತ್ಗಳ ಪ್ರದೇಶಗಳಿಗೆ ಅನ್ವಯಿಸಿತ್ತು. ಸರಕಾರದ ನಿರ್ಧಾರವನ್ನು ಫೈಸಲ್ ಹುಸೇನ್ ಎಂಬವನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದ.
Uttarakhand High Court permits animal slaughter for Bakri Eid in Manglaur
report by @DebayonRoy https://t.co/TSeOyVm2yq
— Bar & Bench (@barandbench) July 7, 2022
ಈ ಅರ್ಜಿಯಲ್ಲಿ ಮಂಗಲೌರ ಮಹಾನಗರ ಪಾಲಿಕೆಯ ಕ್ಷೇತ್ರದಲ್ಲಿ ಶೇ. ೯೦ರಷ್ಟು ಮುಸ್ಲಿಮರು ವಾಸಿಸುತ್ತಿದ್ದು, ಕಸಾಯಿಖಾನೆಗಳನ್ನು ಆರಂಭಿಸಲು ಅನುಮತಿ ನೀಡುವಂತೆ ಕೋರಿದ್ದ. ಇದಕ್ಕೆ ಜುಲೈ ೭ ರಂದು ಉತ್ತರಾಖಂಡ ಉಚ್ಚ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ನ್ಯಾಯಾಲಯವು, ‘ಬಕ್ರೀದ್ ದಿನದಂದು ಜಿಲ್ಲೆಯ ಮಂಗಲೌರನ ಪಟ್ಟಣದಲ್ಲಿನ ಕಸಾಯಿಖಾನೆಗಳ ಮೇಲಿನ ನಿಷೇಧ ತೆರವಿಗೆ ಅವಕಾಶ ನೀಡುತ್ತಿದ್ದೇವೆ’ ಎಂದು ಹೇಳಿದೆ. ‘ಪ್ರಾಣಿಗಳ ಹತ್ಯೆಯನ್ನು ಕಸಾಯಿಖಾನೆಯಲ್ಲಿ ಮಾತ್ರ ಮಾಡಬಹುದಾಗಿದೆ’ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಹಿಂಸಾಚಾರಕ್ಕೆ ತಿರುಗಿದ ‘ಕಾಕರೋಚ್ ಜನತಾ ಪಾರ್ಟಿ’ಯ ಸಂಸತ್ ಭವನ ಚಲೋ ಪ್ರತಿಭಟನೆ; ಪೊಲೀಸರಿಂದ ಲಾಠಿ ಪ್ರಹಾರ
5 ವರ್ಷಗಳಲ್ಲಿ 1 ಸಾವಿರ 676 ಪ್ರಕರಣಗಳು ದಾಖಲು: ಕೋಟ್ಯಂತರ ರೂಪಾಯಿ ಮೌಲ್ಯದ ಟಿಕೆಟ್ ಜಪ್ತಿ : Railway Tickets Seized
ಈ ಹಿಂದೆ ನನ್ನನ್ನು ಬಂಗಾಳದಿಂದ ಹೊರಗಟ್ಟಿದ ನಾಯಕರು ಈಗಲೂ ನನ್ನನ್ನು ಭಾಜಪ ಮತ್ತು ಸಂಘವನ್ನು ಬೆಂಬಲಿಸುವವಳು ಎಂದು ಬಿಂಬಿಸುತ್ತಿದ್ದಾರೆ! : Taslima Nasrin
ಬಂಗಾಳದಲ್ಲಿ ಸೆಪ್ಟೆಂಬರ್ 1 ರಿಂದ ಎಲ್ಲಾ ಸರಕಾರಿ ಕಲಾಪಗಳು ಬಂಗಾಳಿ ಭಾಷೆಯಲ್ಲೇ ನಡೆಯಲಿವೆ! – ಮುಖ್ಯಮಂತ್ರಿ : Only Bengali in Bengal
‘ಹಿಂದೂ ದೇವತೆಗಳು ಮಾಂಸ-ಮದ್ಯ ಸೇವಿಸುತ್ತಿದ್ದರು’ ಎಂದು ಹೇಳುವ ಧ್ರುವ್ ರಾಠಿಯ ವೀಡಿಯೊವನ್ನು ೨೪ ಗಂಟೆಗಳಲ್ಲಿ ತೆಗೆದುಹಾಕಿ !
ಕುನಾಲ್ ಕಾಮ್ರಾ ಮತ್ತು ಪ್ರಕಾಶ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿ; ಹಿಂದೂ ಜನಜಾಗೃತಿ ಸಮಿತಿ ಮತ್ತು ಸುಪ್ರೀಂ ಕೋರ್ಟ್ ವಕೀಲರ ಆಗ್ರಹ