
ಡೆಹ್ರಾಡೂನ್ : ಜುಲೈ ೧೦ ರಂದು ಈದ್-ಉಲ್-ಫಿತರ್ ಪ್ರಯುಕ್ತ ಮುಸ್ಲಿಂ ಬಾಹುಳ್ಯವಿರುವ ಮಂಗಲೌರಿನಲ್ಲಿ (ಹರಿದ್ವಾರ) ಕಸಾಯಿಖಾನೆಗಳ ಮೇಲಿನ ನಿಷೇಧವನ್ನು ಉತ್ತರಾಖಂಡ ಉಚ್ಚನ್ಯಾಯಾಲಯ ಹಿಂಪಡೆದಿದೆ. ಮಾರ್ಚ್ ೨೦೨೧ ರಲ್ಲಿ ಹರಿದ್ವಾರದಲ್ಲಿ ನಡೆದ ಕುಂಭಮೇಳದ ಸಂದರ್ಭದಲ್ಲಿ, ಉತ್ತರಾಖಂಡದ ಭಾಜಪ ಸರಕಾರವು ಹರಿದ್ವಾರ ಜಿಲ್ಲೆಯ ಎಲ್ಲಾ ಕಸಾಯಿಖಾನೆಗಳನ್ನು ನಿಷೇಧಿಸಿ ಅವುಗಳ ಪರವಾನಗಿಯನ್ನು ರದ್ದುಗೊಳಿಸಿತ್ತು. ಈ ಆದೇಶವು ೨ ಮಹಾನಗರ ಪಾಲಿಕೆಗಳು, ೨ ಪುರಸಭೆಗಳು ಮತ್ತು ೫ ನಗರ ಪಂಚಾಯತ್ಗಳ ಪ್ರದೇಶಗಳಿಗೆ ಅನ್ವಯಿಸಿತ್ತು. ಸರಕಾರದ ನಿರ್ಧಾರವನ್ನು ಫೈಸಲ್ ಹುಸೇನ್ ಎಂಬವನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದ.
Uttarakhand High Court permits animal slaughter for Bakri Eid in Manglaur
report by @DebayonRoy https://t.co/TSeOyVm2yq
— Bar & Bench (@barandbench) July 7, 2022
ಈ ಅರ್ಜಿಯಲ್ಲಿ ಮಂಗಲೌರ ಮಹಾನಗರ ಪಾಲಿಕೆಯ ಕ್ಷೇತ್ರದಲ್ಲಿ ಶೇ. ೯೦ರಷ್ಟು ಮುಸ್ಲಿಮರು ವಾಸಿಸುತ್ತಿದ್ದು, ಕಸಾಯಿಖಾನೆಗಳನ್ನು ಆರಂಭಿಸಲು ಅನುಮತಿ ನೀಡುವಂತೆ ಕೋರಿದ್ದ. ಇದಕ್ಕೆ ಜುಲೈ ೭ ರಂದು ಉತ್ತರಾಖಂಡ ಉಚ್ಚ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ನ್ಯಾಯಾಲಯವು, ‘ಬಕ್ರೀದ್ ದಿನದಂದು ಜಿಲ್ಲೆಯ ಮಂಗಲೌರನ ಪಟ್ಟಣದಲ್ಲಿನ ಕಸಾಯಿಖಾನೆಗಳ ಮೇಲಿನ ನಿಷೇಧ ತೆರವಿಗೆ ಅವಕಾಶ ನೀಡುತ್ತಿದ್ದೇವೆ’ ಎಂದು ಹೇಳಿದೆ. ‘ಪ್ರಾಣಿಗಳ ಹತ್ಯೆಯನ್ನು ಕಸಾಯಿಖಾನೆಯಲ್ಲಿ ಮಾತ್ರ ಮಾಡಬಹುದಾಗಿದೆ’ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ