ಮಂಗಳೂರು – ಕೇಂದ್ರ ಸರಕಾರವು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ. ಡಾ. ವೀರೇಂದ್ರ ಹೆಗ್ಗಡೆಯವರು ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಗ್ರಾಮೀಣಾಭಿವೃದ್ಧಿಯನ್ನೇ ಗುರಿಯಾಗಿಸಿಕೊಂಡು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸ್ವಉದ್ಯೋಗಕ್ಕೆ ಪ್ರೋತ್ಸಾಹ ನೀಡುವ ರುಡ್ ಸೆಟ್, ಗ್ರಾಮೀಣ ಭಾಗದ ಮಹಿಳೆಯರ ಆರ್ಥಿಕ ಸ್ವಾವಲಂಬನೆ, ಶೈಕ್ಷಣಿಕ ಕ್ಷೇತ್ರದಲ್ಲೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಣ ಒದಗಿಸಲು ಪ್ರೇರಣೆಯಾಗಿರುವ ಡಾ. ವೀರೇಂದ್ರ ಹೆಗ್ಗಡೆಯವರ ಈ ಕಾರ್ಯಕ್ಕೆ ಸಂದ ಗೌರವ ಇದಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಡಾ. ವೀರೇಂದ್ರ ಹೆಗ್ಗಡೆಯವರು ‘ಇದು ಧರ್ಮಸ್ಥಳಕ್ಕೆ, ತನಗೆ ಹಾಗೂ ತಮ್ಮ ಪೂರ್ವಜರಿಗೆ ಸಂದ ಗೌರವವಾಗಿದೆ. ನಮ್ಮಿಂದ ಸಮಾಜಕ್ಕೆ ಏನೆಲ್ಲಾ ಆಗುತ್ತದೋ ಅದೆಲ್ಲಾ ಸೇವೆಯನ್ನು ಮಾಡುವುದಕ್ಕೆ ಪ್ರಯತ್ನಿಸುತ್ತೇನೆ’ ಎಂದಿದ್ದಾರೆ.
ಸನಾತನ ಪ್ರಭಾತ > Post Type > ವಾರ್ತೆಗಳು > ರಾಷ್ಟ್ರೀಯ > ರಾಜ್ಯಸಭೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನಾಮನಿರ್ದೇಶನ
ರಾಜ್ಯಸಭೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನಾಮನಿರ್ದೇಶನ
ಸಂಬಂಧಿತ ಲೇಖನಗಳು
- Loksabha Elections 2024 : ಬಂಗಾಳದಲ್ಲಿ ಮೊದಲ ಹಂತದ ಮತದಾನದಂದು ಹಿಂಸಾಚಾರ !
- Bhojshala Survey 40% Completed: ಧಾರ್ನಲ್ಲಿ (ಮಧ್ಯಪ್ರದೇಶ) ಭೋಜಶಾಲಾದ ಶೇ. 40 ರಷ್ಟು ಸಮೀಕ್ಷೆ ಪೂರ್ಣ
- Cow Smuggling in Solapur: ಶ್ರೀರಾಮ ನವಮಿಯಂದು ಗೋರಕ್ಷಕರ ಮೇಲೆ ಮಾರಣಾಂತಿಕ ಹಲ್ಲೆ ನಡೆದರೂ 7 ಗೋವುಗಳ ಪ್ರಾಣ ಉಳಿಸಿದರು !
- ಗದಗನಲ್ಲಿ ಬಿಜೆಪಿ ಮುಖಂಡನ ಮನೆಗೆ ನುಗ್ಗಿ 4 ಜನರ ಹತ್ಯೆ!
- ಹುಬ್ಬಳ್ಳಿಯಲ್ಲಿ ಮದುವೆಯ ಪ್ರಸ್ತಾಪವನ್ನು ತಿರಸ್ಕರಿಸಿದ್ದಕ್ಕಾಗಿ ಮುಸ್ಲಿಂ ಯುವಕನಿಂದ ಹಿಂದೂ ಹುಡುಗಿಯ ಬರ್ಬರ ಕೊಲೆ !
- ನ್ಯಾಯವಾದಿಗಳ ನಮಾಜಪಠಣವನ್ನು ವಿರೋಧಿಸಿರುವ ಬಗ್ಗೆ ಜಿಲ್ಲಾ ನ್ಯಾಯಾಧೀಶರಿಂದ ಉಚ್ಚನ್ಯಾಯಾಲಯದಲ್ಲಿ ಕ್ಷಮೆ ಯಾಚನೆ !